ಭದ್ರಾವತಿ:ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ನೆರೆವೆರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರೆವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು ಗುರುತಿಸುವ ಮೂಲಕ ಸನ್ಮಾನಿಸಿ ಗೌರವಿಸುತ್ತಿವೆ.ಅದೆ ರೀತಿಯಲ್ಲಿ ಮಹಿಳಾ ಸೇವಾ ಸಮಾಜದ ವತಿಯಿಂದ ಸಹ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಮಹಿಳಾ ಸಮಾಜದ ಸಂಸ್ಥಾಪಕಿ ರತ್ನಮ್ಮ ಶ್ರೀನಿವಾಸ ಮೂರ್ತಿ, ಹಾಗು ಗೌರವಧ್ಯಕ್ಷೆ ವಸುಧಾ ಮುಕುಂದ, ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಲಾಯಿತು.
ಸಂಘದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೋಭಾ ಗಂಗರಾಜು, ಖಜಾಂಚಿ ಜಯಂತಿ ನಾಗರಾಜ್ ಶೇಟ್, ಕಮಲಕುಮಾರಿ, ಇಂದಿರಾ ರಮೇಶ್, ಲೋಯಿತಾ ನಂಜಪ್ಪ, ಶಾರದಾ ಶ್ರೀನಿವಾಸ್, ಡಾ. ವೀಣಾ ಭಟ್, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ : ಈಶ್ವರ್ ಭದ್ರಾವತಿ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್