ಹೊಸನಗರ : ಯಡೂರು ಸುಳುಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ಡಾಕ್ಟರ್ ಇಲ್ಲ ನಮಗೆ ಡಾಕ್ಟರ್ ಬೇಕು ಎಂದು ಪ್ರತಿಭಟನೆ ನಡೆಸಲಾಯಿತು.
ಇಲ್ಲಿ ಸದ್ಯ ಆರ್ಯುವೇದ ಬಗ್ಗೆ ತಿಳಿದಿರುವ ಡಾಕ್ಟರ್ ಇದ್ದು ನಮಗೆ ಇಂಗ್ಲಿಷ್ ಮೆಡಿಸನ್ ಕೋಡುವ ಡಾಕ್ಟರ್ ಬೇಕು. ತೀರ್ಥಹಳ್ಳಿ ಅಥವಾ ಹೊಸನಗರಕ್ಕೆ ಆರೋಗ್ಯ ಸರಿ ಇಲ್ಲ ಎಂದು ಹೋಗುವುದಾದರೆ 30 ಕ್ಕು ಹೆಚ್ಚು ಕಿಲೋಮೀಟರ್ ಅಗುತ್ತದೆ.
ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾರದ 24 ಗಂಟೆ ಇಲ್ಲೇ ಇದ್ದು ಸೇವೆ ಸಲ್ಲಿಸುವ ಡಾಕ್ಟರ್ ಬೇಕು ಏಂದು ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಊರಿನವರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವದಲ್ಲಿ ಸುಳಗೋಡು ಗ್ರಾ ಪ ಅಧ್ಯಕ್ಷ ಸದಾನಂದ ಯಡೂರು ಗ್ರಾಮಪಂಚಾಯತ್ ಅಧ್ಯಕ್ಷರು ಕಲಾವತಿ ಚದ್ರಪ್ಪ ಮಾಸ್ತಿಕಟ್ಟೆ ವಿದ್ಯಾನಂದರಾವ್ ರೈತ ಸಂಘದ ಕಂಪದ ಕೈ ರವಿಂದ್ರ,ಗ್ರಾಮ ಪಂಚಾಯತಿ ಸದಸ್ಯರುಗಳಾದ ಸದಸ್ಯರಾದ ಇಸ್ಮಾಯಿಲ್ ಯಶೋಧ ಚಂದ್ರಶೇಖರ ಉಪಾಧ್ಯಕ್ಷರು ಪ್ರೇಮ ಸತೋಂಷ್ ಶೇಷಾದ್ರಿ ಗಿಣಿಕಲ್ ಸಹಕರ ಸಂಘದ ಉಪಾಧ್ಯಕ್ಷರು ನಾಗೇಶ್ ಹಿರೆಬೈಲ್ ಪೋರುಶತ್ತಮ್ ಜಗನ್ಕೊಪ್ಪ ಕಿರಣ್ ಯಡೂರು ಅರುಣ್ ಕುಂಜು, ಅಹಮ್ಮದ್ ಅಪ್ಪು ಹೆಬ್ಬಾಳ ಬೈಲ್ ಸೋಮಶೇಖರ್ ರಫೀ ಗೌಟಾಣಿ ಇದ್ದರು.
ಈ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ನಾಯಕರಾದ ಡಾ ಆರ್ ಎಂ ಮಂಜುನಾಥ ಗೌಡರು ಬೆಂಬಲವನ್ನು ಸೂಚಿಸಿದರು. ಜೊತೆಗೆ DD ಹಾಗೂ DHO ರವರಿಗೆ ಸ್ಥಳದಿಂದನೇ ಪೋನ್ ಮಾಡಿ ವಿಚಾರಿಸಿದಾಗ ಕೆಲವೇ ದಿನಗಳೊಳಗೆ ಯಡೂರು ಆಸ್ಪತ್ರೆಗೆ ಡಾಕ್ಟರ್ ನೇಮಿಸುವುದಾಗಿ ತಿಳಿಸಿದರು.
ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಡಾ ಸುಂದರೇಶ್, ಕುರುವಳ್ಳಿ ನಾಗರಾಜ್,ಆಶ್ವಲ್ ಗೌಡ ಜೊತೆಯಲ್ಲಿ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್