ರಿಪ್ಪನ್ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳಕೋಡು ಗ್ರಾಮದ ನಾರಾಯಣಪ್ಪ (68) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ ಅವರ ಆತ್ಮೀಯರಾಗಿದ್ದ ಸುಳುಗೋಡು ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಹಾಗೂ ಈಡಿಗ ಸಮಾಜದಲ್ಲಿ ಪ್ರಮುಖ ನಾಯಕರಿಂದ ಗುರುತಿಸಿಕೊಂಡಿದ್ದರು.
ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು ಕೃಷಿಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ:
ಸುಳಕೋಡು ನಾರಾಯಣಪ್ಪ ನಿಧನಕ್ಕೆ ಮಾಜಿ ಶಾಸಕರಾದ ಕಾಗೋಡು ತಿಮ್ಮಪ್ಪ, ಬೇಳೂರು ಗೋಪಾಲಕೃಷ್ಣ, ಮಾಜಿ ಜಿಪಂ ಅಧ್ಯಕ್ಷರಾದ ಕಲಗೋಡು ರತ್ನಾಕರ್,ಬಿ ಪಿ ರಾಮಚಂದ್ರ,ರಾಜ್ಯ ಜೆಡಿಎಸ್ ಮುಖಂಡ ಆರ್ ಎ ಚಾಬುಸಾಬ್,ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್, ರಿಪ್ಪನ್ ಪೇಟೆ ಕಾಂಗ್ರೆಸ್ ಮುಖಂಡರಾದ ಮಧುಸೂದನ್, ಆಸೀಫ಼್ ಬಾಷಾಸಾಬ್,ಉಮಾಕರ,ಆರ್ ಎಸ್ ಶಂಶುದ್ಧೀನ್, ಉಲ್ಲಾಸ್,ಫ಼್ಯಾನ್ಸಿ ರಮೇಶ ಮತ್ತು ಜೆಡಿಎಸ್ ನ ಆರ್ ಎನ್ ಮಂಜುನಾಥ್,ಮುಡುಬ ಧರ್ಮಪ್ಪ ಹಾಗೂ ಇನ್ನಿತರ ಮುಖಂಡರು ಸಂತಾಪ ಸೂಚಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್