Categories: Blog

ರಿಪ್ಪನ್ ಪೇಟೆ : ನೂತನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅನುದಾನ ಬಿಡುಗಡೆ:ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ಪಟ್ಟಣದ ಬಹುದಿನಗಳ ಬೇಡಿಕೆಯಾಗಿದ್ದ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದ ನೂತನ ಕಟ್ಟಡಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸುಮಾರು ನಾಲ್ಕು ಕೋಟಿ ಇಪ್ಪತ್ತಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕರಾದ ಹರತಾಳು ಹಾಲಪ್ಪ ಇಂದಿಲ್ಲಿ ತಿಳಿಸಿದರು.

ರಿಪ್ಪನ್ ಪೇಟೆ ಯಲ್ಲಿರುವ ಪ್ರಸ್ತುತ ಬಾಲಕರ ವಸತಿ ನಿಲಯವು ಶಿಥಿಲ ಅವಸ್ಥೆಯಲ್ಲಿರುವುದರಿಂದ ಬಹುದಿನದ ಬೇಡಿಕೆಯಾಗಿದ್ದ ವಸತಿ ನಿಲಯದ ಕಟ್ಟಡಕ್ಕೆ ಅನುಮೋದನೆ ಸಿಕ್ಕಿರುವುದರಿಂದ ಹರತಾಳು ಹಾಲಪ್ಪ ನವರು ಸ್ಥಳಕ್ಕೆ ಭೇಟಿ ನೀಡಿ ಕಟ್ಟಡದ ನಿರ್ಮಾಣದ ಬಗ್ಗೆ ಇಂಜಿನಿಯರ್ ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿ ಕಟ್ಟಡದ ನೀಲಿ ನಕ್ಷೆಯನ್ನು ವೀಕ್ಷಿಸಿ ಮಾಡಬೇಕಾದ ಬದಲಾವಣೆ ಹಾಗು ಸಲಹೆಯನ್ನು ನೀಡಿದರು..
ಈ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಶಾಸಕರು ಇಲ್ಲಿ ನಿರ್ಮಿಸಲಾಗುವ ಎರಡಂತಸ್ತಿನ ಕಟ್ಟಡವು ಎಲ್ಲಾ ತರಹದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೊಂದಿರುತ್ತದೆ.ಮುಂದಿನ ಹದಿನೈದು ದಿನಗಳ ಒಳಗೆ ಗುದ್ದಲಿಪೂಜೆ ನೆರವೇರಿಸಿ,ಆದಷ್ಟು ಬೇಗ ಕಟ್ಟಡ ಉದ್ಘಾಟಿಸಲಾಗುವುದು ಎಂದು ಶಾಸಕ ಹಾರತಾಳು ಹಾಲಪ್ಪ ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣವಾಗುವವರೆಗೆ ವಸತಿಗೃಹದಲ್ಲಿರುವ ಬಾಲಕರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಶಾಸಕರು ನಿರ್ದೇಶಿಸಿದರು.

ಈ ಸಂಧರ್ಭದಲ್ಲಿ ಅಸಮರ್ಪಕ ಕಟ್ಟಡ ನೀಲನಕ್ಷೆ ಸಿದ್ದಪಡಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ಇಂಜಿಯರರನ್ನು ತರಾಟೆಗೆ ತೆಗೆದುಕೊಂಡ ಶಾಸಕರು ಸಮರ್ಪಕ ಕಟ್ಟಡ ನೀಲನಕ್ಷೆ ಸಿದ್ದಪಡಿಸುವಂತೆ ಸೂಚಿಸಿದರು.

ಬಹುದಿನಗಳ ಬೇಡಿಕೆಯಾಗಿದ್ದ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯವನ್ನು ನಿರ್ಮಿಸುವಲ್ಲಿ ಶಾಸಕರು ಸಫಲರಾಗಿರುವುದಕ್ಕೆ ಸಾರ್ವಜನಿಕರು ಶಾಸಕರನ್ನು ಪ್ರಶಂಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್, ಮುಖಂಡರಾದ ಆರ್ ಟಿ ಗೋಪಾಲ, ಎಂ ಬಿ ಮಂಜುನಾಥ್,ಎನ್ ಸತೀಶ್, ಸುಂದರೇಶ್,ಸುಧೀಂದ್ರ
ಪೂಜಾರಿ, ಎ ಟಿ ನಾಗರತ್ನಮ್ಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

15 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

18 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

18 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

19 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago