Breaking
12 Jan 2026, Mon

ರಿಪ್ಪನ್ ಪೇಟೆ: ಶಾಸಕ ಹರತಾಳು ಹಾಲಪ್ಪರವರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಸಮಾಜದವರಿಂದ ಒತ್ತಾಯ:

ರಿಪ್ಪನ್‌ಪೇಟೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಾಜಿ ಸಚಿವ, ಎಂಎಸ್ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಹರತಾಳು ಹಾಲಪ್ಪನವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ರಿಪ್ಪನ್‌ಪೇಟೆ ವೀರಶೈವಲಿಂಗಾಯತ ಸಮಾಜದ ಮುಖಂಡರುಗಳಾದ ಮೆಣಸೆ ಆನಂದ,ಕಮದೂರು ರಾಜಶೇಖರ್, ಹೆಚ್.ಎಸ್.ರವಿ ಹಾಲುಗುಡ್ಡೆ, ನೆವಟೂರು ದೇವೇಂದ್ರಪ್ಪಗೌಡ, ಯೋಗೇಂದ್ರಗೌಡ, ಜಿ.ಡಿ ಮಲ್ಲಿಕಾರ್ಜುನ, ಕಳಸೆ ಗಂಗಾಧರಗೌಡ ಒತ್ತಾಯಿಸಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರುಗಳು ಹಾಲಪ್ಪನವರು ಹೊಸನಗರ-ಸಾಗರ-ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಸಚಿವರಾಗಿ ಕಾರ್ಯನಿರ್ವಹಿಸಿದ್ದು ಅಲ್ಲದೆ ಶಾಸಕರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು ಜಾತಿ ಭೇದ ಭಾವ ಮಾಡದೆ ಸಾಗರ ವಿಧಾನಸಭಾ ಕ್ಷೇತ್ರದ ವಿವಿಧ ಸಮುದಾಯದವರ ಬೇಡಿಕೆಗನುಗುಣವಾಗಿ ಬಿ.ಎಸ್.ಯಡಿಯೂರಪ್ಪನವರ ಅವಧಿಯಲ್ಲಿ ಸುಮಾರು 26 ಕೋಟಿ ರೂ. ಅನುದಾನವನ್ನು ಕೊಡಿಸುವುದರೊಂದಿಗೆ ವೀರಶೈವ ಲಿಂಗಾಯಿತರ ಸಮಾಜದ ಕಲ್ಯಾಣ ಮಂದಿರ, ಕೆಂಜಿಗಾಪುರ ವೀರಭದ್ರಸ್ವಾಮಿ ದೇವಸ್ಥಾನದ ಬಳಿಯ ಕಲ್ಯಾಣ ಮಂದಿರ, ಮೂಲೆಗದ್ದೆಮಠ, ಆನಂದಪುರ, ಮುರುಘಾಮಠ ಹೀಗೆ ಹಲವು ಮಠಗಳ ಅಭಿವೃದ್ದಿಕಾಮಗಾರಿಗೆ 9 ಕೋಟಿ ರೂ.ಗಳಿಗೂ ಹೆಚ್ಚು ಅನುದಾನವನ್ನು ಕೊಡಿಸಿದ್ದಾರೆ.

ಈ ಹಿಂದೆ  ಶಾಸಕ ಹರತಾಳು ಹಾಲಪ್ಪನವರು ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಾರೆ ಅಲ್ಲದೆ ಶಾಸಕರು ಎಂಎಸ್ಐಎಲ್ ಅಧ್ಯಕ್ಷರಾಗಿರುವ ಹರತಾಳು ಹಾಲಪ್ಪನವರಿಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗುವುದೆಂದು ರಾಜ್ಯದ ಬಿಜೆಪಿ ಪಕ್ಷದ ಮುಖಂಡರಿಗೆ ಮತ್ತು ರಾಷ್ಟ್ರೀಯ ನಾಯಕರಿಗೆ ಮನವಿ ಮೂಲಕ ಆಗ್ರಹಿಸಿದ್ದಾರೆ.

ನೂತನ ಸಚಿವ ಸಂಪುಟದಲ್ಲಿ ಹರತಾಳು ಹಾಲಪ್ಪನವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಗಳೂರಿಗೆ ನಿಯೋಗ ದೊಂದಿಗೆ ತೆರಳಿ ಪಕ್ಷದ ಹಿರಿಯ ಮುಖಂಡರೊಂದಿಗೆ  ಮನವಿ ಸಲ್ಲಿಸಲಾಗುವುದು ಎಂದು ಈ ಸಂಧರ್ಭದಲ್ಲಿ ತಿಳಿಸಿದರು.



ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌ ರಿಪ್ಪನ್ ಪೇಟೆ




ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..








About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version