Categories: Blog

ರಿಪ್ಪನ್ ಪೇಟೆ: ಶಿವಮೊಗ್ಗದ ನರ್ಸಿಂಗ್ ವಿಧ್ಯಾರ್ಥಿನಿ ಬೆಳ್ಳೂರು ಕಾಡಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಕಾಡಿನ ಮಧ್ಯೆ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಶವ ಪತ್ತೆಯಾಗಿದೆ.

ತಳಲೆ -ಬೆಳ್ಳೂರು ಮಾರ್ಗದ ಮಧ್ಯದಲ್ಲಿ ರಸ್ತೆಯಿಂದ ಸುಮಾರು ಅರ್ಧ ಕಿ.ಮೀ ಕಾಡಿನ ಒಳಗೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯು ಶಿವಮೊಗ್ಗದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು.

ಯುವತಿಯ ಹೆಸರು ಕವಿತಾ(22) ಎಂದು ತಿಳಿದುಬಂದಿದ್ದು ಜೋಗ ಸಮೀಪದ ಕಾನೂರು ನಿವಾಸಿಯಾಗಿದ್ದಾಳೆ. ಕಳೆದ ಐದಾರು ವರ್ಷದ ಹಿಂದೆ ರಿಪ್ಪನ್‌ಪೇಟೆಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಕಗ್ಗಲಿ ಗ್ರಾಮದ ಶಿವಮೂರ್ತಿ ಎಂಬ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಳು.ನಂತರ  ಭದ್ರಾವತಿಯಲ್ಲಿ ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣದಿಂದಾಗಿ ಅಸಮದಾನಗೊಂಡ ಯುವಕ ಶಿವಮೂರ್ತಿ ನಿನ್ನೆ ದಿನ ಯುವತಿಯನ್ನು ರಿಪ್ಪನ್ ಪೇಟೆಗೆ ಕರೆಯಿಸಿಕೊಂಡು ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಗ್ಗಲಿ ಕಾಡಿಗೆ ಕರೆದುಕೊಂಡು ಹೋಗಿ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ತಾನು ಕಳೆನಾಶಕ ಸೇವಿಸಿ ಸಾವು-ಬದುಕಿನ ಮಧ್ಯ ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಗ್ರಾಮಸ್ಥರ ಪ್ರಕಾರ ಯುವತಿಯನ್ನ ಕೊಂದು ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹೇಳಲಾಗುತ್ತಿದೆ.

ಕವಿತಾಳ ಶವದ ಬಳಿ ಡೆತ್ ನೋಟ್ ಪತ್ತೆಯಾಗಿದೆ. ಆದರೆ ಈ ಪತ್ರದಲ್ಲಿ ಶಿವಮೂರ್ತಿ ಎಂಬ ಯುವಕ ಬರೆದ ಪತ್ರವೆಂದು ಹೇಳಲಾಗುತ್ತಿದೆ.


ಈ ಬಗ್ಗೆ ಯುವಕ ಬರೆದಿರುವ ಪತ್ರವೊಂದು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು ಅದರಲ್ಲಿ ಈ ರೀತಿ ಬರೆಯಲಾಗಿದೆ.

“ನಾನು ಪಿಯುಸಿ ಓದುತ್ತಿದ್ದ ಕಾಲೇಜಿನಲ್ಲಿ ಭಟ್ಕಳ ಹುಡುಗಿಯನ್ನು ಪ್ರೀತಿ ಮಾಡಿದ್ದೆ ಆದರೆ ಅವಳು ನನ್ನನ್ನು 7 ವರ್ಷಗಳ ಕಾಲ ಪ್ರೀತಿಸಿ ನಂತರ ಇನ್ನೊಬ್ಬ ಭದ್ರಾವತಿ ಆ್ಯಂಬುಲೆನ್ಸ್ ಡ್ರೈವರ್ ಅನ್ನು ಇಷ್ಟಪಟ್ಟು ನನಗೆ ಮೋಸ ಮಾಡಿದ ಕಾರಣ ನನಗೆ ಸಹಿಸಲಾರದೆ ಅವಳನ್ನು ಕರೆದು ತಂದು ಅವಳ ಅನಿಸಿಕೆಗಳನ್ನು ಕೇಳುವ ಬಗ್ಗೆ ಇಲ್ಲಿ ಕೇಳಿರುತ್ತೇನೆ. ಮುಂದೆ ನಡೆಯುವ ಬಗ್ಗೆ ಅವಳು ನಿರ್ಧಾರ ತೆಗೆದುಕೊಂಡಿರುತ್ತಾಳೆ. ಇಂತಿ ಶಿವಕುಮಾರ್, ಕವಿತಾ ಎಂದಿಗೂ ಪ್ರೀತಿಯನ್ನು ನಂಬಬೇಡಿ ಸ್ನೇಹಿತರೆ” ಎಂದು ಬರೆದಿದೆ.

.   :::  ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾಗಲ್ ಪ್ರೇಮಿ ;;;;


ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ ಶೇಖರಪ್ಪ, ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಪ್ಪ,ಮತ್ತು ಹೊಸನಗರ ವೃತ್ತ ನಿರೀಕ್ಷಕ ಮಧುಸೂದನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯುವತಿಯ ತಂದೆ ದಾನಪ್ಪ ನೀಡಿದ ದೂರಿನನ್ವಯ ಕೇಸ್‌ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮರಣೊತ್ತರ ಪರೀಕ್ಷೆಗೆ ಮೃತದೇಹವನ್ನು ಶಿವಮೊಗ್ಗದ ಸಿಂಸ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಒಟ್ಟಾರೆಯಾಗಿ ಯುವತಿಯ ಕೊಲೆಯೋ ಆತ್ಮಹತ್ಯೆಯೋ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.




ನಿರಂತರ ಸ್ಥಳೀಯ ಸುದ್ದಿಯನ್ನು ಪಡೆಯಲು ಪೋಸ್ಟ್ ಮ್ಯಾನ್ ನ್ಯೂಸ್ ನ ಫೇಸ್‌ಬುಕ್‌ ಪೇಜ್ ನ್ನು ಲೈಕ್ ಮಾಡಿ. 👇👇👇

https://www.facebook.com/ಪೋಸ್ಟ್-ಮ್ಯಾನ್-ನ್ಯೂಸ್-102786798745413/



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

20 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

20 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

22 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

2 days ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

2 days ago