Categories: Blog

ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ದೇಶ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸ್ವಾತಂತ್ರ್ಯದ  ಅಮೃತ ಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್‌ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನ ರಾಷ್ಟ್ರಗಳಲ್ಲಿ ಭಾರತ ಶಾಂತಿಪ್ರಿಯ ದೇಶವಾಗಿದೆ. ಇಲ್ಲಿ ಧರ್ಮಗಳ ಮಧ್ಯೆ ಪ್ರೀತಿ, ಮಾನವೀಯತೆ ಇದೆ.

ಇಲ್ಲಿ ಜೀವಿಸುವುದೇ ನಮ್ಮ ಪುಣ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಚಟುವಟಿಕೆಗಳನ್ನು ಕಂಡರೆ ಇದು ಅರ್ಥವಾಗುತ್ತದೆ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಹೆಚ್ಚಾಗುತ್ತಿದೆ. ಇಡೀ ಜಗತ್ತು ತಲೆ ತಗ್ಗಿಸುವಂತಹ ಕೆಲಸ ನಡೆಯುತ್ತಿದೆ. ಕ್ರೂರತೆ ಅಲ್ಲಿ ವಿಜೃಂಭಿಸುತ್ತಿದ್ದು, ಮಾನವೀಯತೆ ಮರೆಯಾಗಿದೆ. ಇದನ್ನೆಲ್ಲ ನೋಡಿದರೆ, ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ ಎಂದರು.

ದೇಶ ಸ್ವಾತಂತ್ರ್ಯ ಪಡೆದು 2047 ಕ್ಕೆ 100 ವರ್ಷ ಆಗಲಿರುವುದರಿಂದ ಮಾದರಿ ರಾಷ್ಟ್ರ ನಿರ್ಮಾಣ ಮಾಡಲು ಎಲ್ಲರೂ ಪಾಲ್ಗೊಳ್ಳುವಂತೆ ಕರೆ ನೀಡಿದ ಅವರು, ಸ್ವಾತಂತ್ರ್ಯ ದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿಯೂ ದೇಶದಲ್ಲಿ ಉಗ್ರಗಾಮಿಗಳು, ದೇಶದ್ರೋಹಿಗಳು ಅಲ್ಲಲ್ಲಿ ಅಡಗಿ ಕುಳಿತಿದ್ದಾರೆ. ಅವರನ್ನು ಸದೆ ಬಡಿಯುವ ಕೆಲಸವೂ ಆಗಬೇಕಿದೆ ಎಂದರು. ಯುವ ಸಮುದಾಯದಲ್ಲಿ ರಾಷ್ಟ್ರ ಭಕ್ತಿ ಬೆಳೆಸಲು ಹಾಗೂ ಸ್ವಾತಂತ್ರ್ಯ ಹೋರಾಟದ ಮಹತ್ವ ತಿಳಿಸುವ ಸಲುವಾಗಿ ಹೃದಯದಲ್ಲಿ ರಾಷ್ಟ್ರ ಭಕ್ತಿಯೊಂದಿಗೆ ಸೈಕಲ್‌ ಜಾಥಾ ನಡೆಸಲಾಗುತ್ತಿದೆ.
ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ತಿಳಿಸಿದರು. ವಿಶ್ವದಲ್ಲಿಯೇ ಭಾರತ ಶಾಂತಿಪ್ರಿಯ ರಾಷ್ಟ್ರ ವಾಗಿದೆ. ನಾವಾಗಿ ನಾವು ಯಾರ ತಂಟೆಗೂ ಹೋಗುವುದಿಲ್ಲ. ಆದರೆ, ನಮ್ಮ ಸುದ್ದಿಗೆ ಬಂದರೆ ಬಿಡುವುದಿಲ್ಲ ಎಂಬ ಸಂದೇಶವನ್ನು ಈಗಾಗಲೇ ನೀಡಲಾಗಿದೆ. ಮುಂದೆಯೂ ನಮ್ಮ ತಂಟೆಗೆ ಬರುವವರಿಗೆ ತಕ್ಕ ಉತ್ತರ ನೀಡಲಾಗುತ್ತದೆ ಎಂದರು.

ಅಫ್ಘಾನಿಸ್ಥಾನದಲ್ಲಿ ಏನಾಗುತ್ತಿದೆ ಎಂಬುದನ್ನು ಇಡೀ ಜಗತ್ತು ನೋಡುತ್ತಿದೆ. ಮಕ್ಕಳು, ಮಹಿಳೆಯರು ಹಾಗೂ ಅಲ್ಲಿನ ದೇಶಭಕ್ತರ ಮೇಲೆ ನಿರಂತರವಾಗಿ ತಾಲಿಬಾನಿಗಳು ದೌರ್ಜನ್ಯ ನಡೆಸುತ್ತಿದ್ದಾರೆ. ಹಿಂದಿನಿಂದಲೂ ಉಗ್ರಗಾಮಿಗಳನ್ನು ಬೆಂಬಲಿಸಿಕೊಂಡು ಬಂದಿರುವ ದೇಶದಲ್ಲಿನ ಕೆಲವು ಸ್ವಯಂಘೋಷಿತ ಬುದ್ಧಿಜೀವಿಗಳು, ವಿಚಾರವಾದಿಗಳು ಇದರ ಬಗ್ಗೆ ಈಗ ಬಾಯಿ ಮುಚ್ಚಿಕೊಂಡು ಸುಮ್ಮನಿದ್ದಾರೆ ಎಂದು ಹರಿಹಾಯ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಯುವಮೋರ್ಚಾದ ಅಧ್ಯಕ್ಷ ದರ್ಶನ್‌ ಆರ್‌.ವಿ. ವಹಿಸಿದ್ದರು. ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌, ನಗರ ಬಿಜೆಪಿ ಅಧ್ಯಕ್ಷ ಎನ್‌.ಕೆ. ಜಗದೀಶ್‌, ಮೇಯರ್‌ ಸುನಿತಾ ಅಣ್ಣಪ್ಪ, ಉಪ ಮೇಯರ್‌ ಗನ್ನಿ ಶಂಕರ್‌, ವಿಭಾಗ ಪ್ರಭಾರಿ ಗಿರೀಶ್‌ ಪಟೇಲ್‌, ಜ್ಯೋತಿ ಪ್ರಕಾಶ್‌, ಎಸ್‌. ದತ್ತಾತ್ರಿ, ಬಳ್ಳೆಕೆರೆ ಸಂತೋಷ್‌ ಮತ್ತಿತರರು ಇದ್ದರು.

ನೆಹರು ಕ್ರೀಡಾಂಗಣ, ಉಷಾ ನಸಿಂìಗ್‌ ಹೋಮ್‌, ಲಕ್ಷ್ಮೀ ಟಾಕೀಸ್‌, ಜೈಲ್‌ ವೃತ್ತ ರಸ್ತೆ, ಪ್ರವಾಸಿ ಮಂದಿರ ವೃತ್ತ, ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ವೃತ್ತ, ಶಿವಪ್ಪ ನಾಯಕ ವೃತ್ತ, ಗೋಪಿ ವೃತ್ತ, ಮಹಾವೀರ ವೃತ್ತದ ಮೂಲಕ ಪುನಃ ನೆಹರು ಕ್ರೀಡಾಂಗಣದವರೆಗೆ ಜಾಥಾ ನಡೆಸಲಾಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

6 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

10 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

10 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago