Categories: Blog

ಶಿವಮೊಗ್ಗ: ಆಗಸ್ಟ್ 29ರಂದು ಕ್ರೀಡಾ ದಿನದ ಪ್ರಯುಕ್ತ ಫಿಟ್ ಇಂಡಿಯಾ ಫ್ರೀಡಂ ರನ್ :

ಶಿವಮೊಗ್ಗ :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವರು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದ್ದು, ಇದರ ಅಂಗವಾಗಿ 75 ನೇ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಲಾಗುತ್ತಿದೆ.

ಮಾರ್ಚ್ 12 ರಂದು ಭಾರತದ ಪ್ರಧಾನ ಮಂತ್ರಿಯವರು ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಕುರಿತು ಸ್ಪೂರ್ತಿದಾಯಕ ಭಾಷಣದ ಮೂಲಕ ಆಜಾದಿ ಕಾ ಅಮೃತ ಮಹೋತ್ಸವದ ಪರಿಕಲ್ಪನೆ ಬಗ್ಗೆ ತಿಳಿಸಿ, ಮಹೋತ್ಸವಕ್ಕೆ ಹಸಿರು ನಿಶಾನೆ ತೋರಿಸಿದ್ದರು.

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸಾಮಾಜಿಕ  ಅಂತರದ ಮಾನದಂಡವನ್ನು ಅನುಸರಿಸಿ ದೇಶಾದ್ಯಂತ ಫಿಟ್‍ನೆಸ್‍ನ ಅಗತ್ಯತೆಯನ್ನು ಸಕ್ರಿಯಗೊಳಿಸಲು ‘ಫಿಟ್ ಇಂಡಿಯಾ ಫ್ರೀಡಂ ರನ್’ ಅಭಿಯಾನವನ್ನು ವರ್ಚುವಲ್ ರನ್ ಪರಿಕಲ್ಪನೆಯ ಮೇಲೆ ಆರಂಭಿಸಲಾಯಿತು. 2020 ರ  ಆಗಸ್ಟ್ 15ರಿಂದ ಅಕ್ಟೋಬರ್ 2 ರವರೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೇಂದ್ರ/ರಾಜ್ಯ ಇಲಾಖೆಗಳು ಮತ್ತು ಕೇಂದ್ರ ಸಶಸ್ತ್ರ ಪಡೆಗಳು, ಎನ್‍ಜಿಓ ಗಳು, ಖಾಸಗಿ ಸಂಸ್ಥೆಗಳು, ಶಾಲೆಗಳು, ವ್ಯಕ್ತಿಗಳು, ಯುವಕ/ಯುವತಿ ಮಂಡಳಿಗಳು, ಎನ್‍ಎಸ್‍ಎಸ್, ಎನ್‍ಸಿಸಿ ಸೇರಿದಂತೆ ಸುಮಾರು 5 ಕೋಟಿಗೂ ಹೆಚ್ಚು ಜನರು ಭಾಗವಹಿಸಿ ಸುಮಾರು 18 ಕೋಟಿ ಕಿ.ಮೀ ದೂರವನ್ನು ಕ್ರಮಿಸಿದ್ದಾರೆ.

2021 ರ  ಆಗಸ್ಟ್ 13 ರಿಂದ ಅಕ್ಟೋಬರ್ 2 ರವರೆಗೆ ಮುಕ್ತಾಯಗೊಳ್ಳುವ ಫಿಟ್ ಇಂಡಿಯಾ ಫ್ರೀಡಮ್ 2.0 ರನ್ ಅಭಿಯಾನ ಆರಂಭವಾಗಿದ್ದು, ಜನರು ತಮ್ಮ ದೈನಂದಿನ ಜೀವನದಲ್ಲಿ ಓಟ ಮತ್ತು ಕ್ರೀಡೆಯಂತಹ ಫಿಟ್‍ನೆಸ್ ಚಟುವಟಿಕೆಗಳನ್ನು ತೆಗೆದುಕೊಳ್ಳಲು ಈ ರನ್ ಪ್ರೋತ್ಸಾಹಿಸುತ್ತಿದೆ. ಬೊಜ್ಜು, ಆಲಸ್ಯ, ಒತ್ತಡ, ಆತಂಕ, ರೋಗ ಇತ್ಯಾದಿಗಳಿಂದ ಮುಕ್ತಿ ಪಡೆಯುವುದು ಇದರ ಗುರಿಯಾಗಿದೆ. ಈ ಅಭಿಯಾನದ ಮೂಲಕ ‘ಫಿಟ್ನೆಸ್ ಕಿ ಡೋಸ್ ಆಧಾ ಗಂಟಾ ರೋಜ್’ ಘೋಷವಾಕ್ಯದ ಮೂಲಕ ನಾಗರೀಕರು ತಮ್ಮ ಜೀವನದಲ್ಲಿ ಕನಿಷ್ಟ 50 ನಿಮಿಷಗಳ ದೈಹಿಕ ಚಟುವಟಿಕೆ/ಯೋಗ/ಧ್ಯಾನದಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಸಂಕಲ್ಪ ಮಾಡಲ ಕರೆ ನೀಡಲಾಗಿದೆ.

 ರಾಷ್ಟ್ರಾದ್ಯಂತ ಫಿಟ್‍ನೆಸ್ ಇಂಡಿಯಾ ಫ್ರೀಡಂ ರನ್ 2.0 ಅಭಿಯಾನವನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಹಾಗೂ ರಾಜ್ಯ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ನಿಸಿತ್ ಪ್ರಮಾಣಿಕ್ ರವರು 2021 ರ ಆಗಸ್ಟ್ 13 ರಂದು ಚಾಲನೆ ನೀಡಿದರು. ಬಿಎಸ್‍ಎಫ್, ಸಿಐಎಸ್‍ಎಫ್, ಸಿಆರ್‍ಪಿಎಫ್, ರೈಲ್ವೇ, ನೆಹರು ಯುವ ಕೇಂದ್ರ, ಐಟಿಬಿಪಿ, ಎನ್‍ಎಸ್‍ಜಿ, ಎಸ್‍ಎಸ್‍ಬಿ ಕೂಡ ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಆಗಸ್ಟ್ 13 ರಂದು ದೇಶದ ವಿವಿಧ ಐತಿಹಾಸಿಕ ಸ್ಥಳಗಳಲ್ಲಿ 75 ಕಾರ್ಯಕ್ರಗಳು ನಡೆದವು.

ನಾವು 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಫಿಟ್ ಮತ್ತು ಆರೋಗ್ಯಕರ ಭಾರತಕ್ಕಾಗಿ ನಾವೆಲ್ಲ ಸಂಕಲ್ಪ ಮಾಡಬೇಕು. ಏಕೆಂದರೆ ಫಿಟ್ ಮತ್ತು ಆರೋಗ್ಯಕರ ಭಾರತ ಮಾತ್ರ ಬಲಿಷ್ಟ ಭಾರತವಾಗಲು ಸಾಧ್ಯ. ಹಾಗಾಗಿ ಪ್ರತಿಯೊಬ್ಬರೂ ರಾಷ್ಟ್ರವ್ಯಾಪಿ ಫಿಟ್ ಇಂಡಿಯಾ ಫ್ರೀಡಂ ರನ್ 2.0 ನಲ್ಲಿ ಭಾಗವಹಿಸಿ ಮತ್ತು ಈ ಅಭಿಯಾನವನ್ನು ಜನರ ಚಳವಳಿಯನ್ನಾಗಿ ಮಾಡಬೇಕೆಂದು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಆಶಿಸಿದೆ. ಅಕ್ಟೋಬರ್ 2 ರವರೆಗೆ ಪ್ರತಿವಾರ 75 ಜಿಲ್ಲೆಗಳ 75 ಹಳ್ಳಿಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಹೀಗಾಗಿ ಫಿಟ್ ಇಂಡಿಯಾ ಫ್ರೀಡಂ ರನ್‍ಗಳನ್ನು ರಾಷ್ಟ್ರದ 744 ಜಿಲ್ಲೆಯ 75 ಗ್ರಾಮಗಳಲ್ಲಿ ಮತ್ತು 30 ಸಾವಿರ ಶಿಕ್ಷಣ/ಸಂಘ ಸಂಸ್ಥೆಗಳಲ್ಲಿ ದೇಶಾದ್ಯಂತ ಆಯೋಜಿಸಲಾಗುತ್ತಿದೆ.

ಆ.29-ಕ್ರೀಡಾ ದಿನದ ಪ್ರಯುಕ್ತ ಫಿಟ್ ಇಂಡಿಯಾ ಫ್ರೀಡಂ ರನ್ :

ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‍ಎಸ್‍ಎಸ್/ಎನ್‍ಸಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಎನ್‍ಜಿಓ, ಯುವಜನ ಸಂಘಟನೆಗಳು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಂದು ಬೆಳಿಗ್ಗೆ ನೆಹರೂ ಕ್ರೀಡಾಂಗಣದಿಂದ ಶಿವಪ್ಪ ನಾಯಕ ಅರಮನೆವರೆಗೆ ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ.ಕೆ.ಟಿ.ಕೆ ತಿಳಿಸಿದ್ದಾರೆ.






*ನಿರಂತರ ಸ್ಥಳೀಯ ಸುದ್ದಿಯನ್ನು ಪಡೆಯಲು ಪೋಸ್ಟ್ ಮ್ಯಾನ್ ಫೇಸ್‌ಬುಕ್‌ ಪೇಜ್ ನ್ನು ಲೈಕ್ ಮಾಡಿ.*

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

8 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

11 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

11 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago