Categories: Blog

ಶಿವಮೊಗ್ಗ: ಒತ್ತುವರಿ ಕೆರೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ:

ಶಿವಮೊಗ್ಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು ಗುರಿಯನ್ನು ನಿಗದಿಪಡಿಸಿ ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಳಿಕ, ಆ ಕೆರೆಯನ್ನು ಸಂಬಂಧಪಟ್ಟ ಇಲಾಖೆಯ ಸುಪರ್ದಿಗೆ ಒಪ್ಪಿಸಿ, ಇಲಾಖೆಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಅಧಿಸೂಚನೆ ಹೊರಡಿಸಬೇಕು. ಮತ್ತೆ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ ಮೊಕದ್ದಮೆ ದಾಖಲಿಸಬೇಕು ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಕೆರೆಯನ್ನು ಒತ್ತುವರಿ ಮಾಡಲು ಅವಕಾಶ ಕಲ್ಪಿಸಬಾರದು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿಕೊಂಡು ಒತ್ತುವರಿ ತೆರವು ಮತ್ತು ಸಂರಕ್ಷಣೆಗೆ ಕ್ರಿಯಾ ಯೋಜನೆ ರೂಪಿಸಬೇಕು. ಎಚ್ಚರಿಕೆ ಕೊಟ್ಟ ಬಳಿಕವೂ ಒತ್ತುವರಿ ಮುಂದುವರೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 6803 ಕೆರೆಗಳಿದ್ದು, 51368 ಎಕ್ರೆ ಪ್ರದೇಶ ವ್ಯಾಪ್ತಿಯಲ್ಲಿದೆ. ಶಿವಮೊಗ್ಗ ತಾಲೂಕಿನಲ್ಲಿ 896, ಭದ್ರಾವತಿ 427, ತೀರ್ಥಹಳ್ಳಿ 1242, ಸಾಗರ 484, ಸೊರಬ 1204, ಶಿಕಾರಿಪುರ 1271 ಮತ್ತು ಹೊಸನಗರದಲ್ಲಿ 1279 ಕೆರೆಗಳಿವೆ. ಇದುವರೆಗೆ 1373 ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಲಾಗಿದ್ದು, 11,152 ಎಕರೆ ವ್ಯಾಪ್ತಿ ಗುರುತಿಸಲಾಗಿದೆ. ಇನ್ನೂ 5430 ಕೆರೆಗಳ ಸರ್ವೇ ಕಾರ್ಯ ನಡೆಸಬೇಕಾಗಿದ್ದು, 39,801 ಎಕರೆ ಪ್ರದೇಶದಲ್ಲಿದೆ. ಇದುವರೆಗೆ ಸರ್ವೆ ಮಾಡಲಾಗಿರುವ ಕೆರೆಗಳ ಪೈಕಿ 660 ಕೆರೆಗಳಲ್ಲಿ 2284 ಎಕರೆ ಒತ್ತುವರಿ ಗುರುತಿಸಲಾಗಿದೆ. ಇವುಗಳ ಪೈಕಿ 231 ಕೆರೆಗಳಲ್ಲಿ 576 ಎಕರೆ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಇನ್ನೂ 429 ಕೆರೆಗಳ 398 ಎಕರೆ ಒತ್ತುವರಿಯನ್ನು ತೆರವುಗೊಳಿಸಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

6 hours ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

14 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

15 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

1 day ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

1 day ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

1 day ago