ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯದ ಬುದ್ಧಿಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರ ಪ್ರತಿಕೃತಿ ದಹಿಸುವ ಮೂಲಕ ಯುವಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ನಗರದ ಬಿಹೆಚ್ ರಸ್ತೆಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.
ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಮತ್ತು ಬುದ್ದಿ ಜೀವಿಗಳ ಬಗ್ಗೆ ಅಸಂಬದ್ದವಾಗಿ,ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹುಚ್ಚ ಎಂದು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಲಾಯಿತು.
ತಾಲಿಬಾನ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ತಮ್ಮ ಬಾಯಿ ಚಪಲಕ್ಕಾಗಿ ಹೊಲಸು ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನ ಪಾದದ ಧೂಳಿಗೂ ಸಮನಲ್ಲದ ಈ ಯತ್ನಾಳ್ ಕನ್ನಡನಾಡಿನಲ್ಲಿ ಇರುವುದೇ ಒಂದು ಅಸಂಬದ್ದವಾಗಿದೆ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.
ಧರ್ಮಗಳ ನಡುವೆ ಮಾತನಾಡಿ, ದೇಶದಲ್ಲಿ ಶಾಂತಿ ಕದಡುವ ಹೇಳಿಕೆ ನೀಡುತ್ತಿರುವ ಇಂತಹ ದೇಶದ್ರೋಹಿಗಳನ್ನ ಶಾಸಕ ಸ್ಥಾನದಿಂದ ಕೂಡಲೇ ವಜಾಗೊಳಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯಪಾಲರಲ್ಲಿ ಯುವ ಕಾಂಗ್ರೆಸ್ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್. ರಮೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್,ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್.ಕುಮರೇಶ್ , ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಶಿಕುಮಾರ್ ಸಿರಿಗೆರೆ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲೀಮ್ ಅಹಮ್ಮದ್ ಸಿರಿಗೆರೆ, ಪದಾಧಿಕಾರಿಗಳಾದ ಅರುಣ್ ನವುಲೆ , ವೆಂಕಟೇಶ್ ಕಲ್ಲೂರು , ಪವನ್ , ಮಸ್ತಾನ್ ,ಸುಹಾಸ್ ಗೌಡ , ಶ್ರೀನಿವಾಸ್ , ರಾಹುಲ್ ಸಿಗೇಹಟ್ಟಿ, ಪ್ರಶಾಂತ್ , ದೇವರಾಜ್ , ನಾಗರಾಜ್ , ವೆಂಕಟೇಶ್, ಅಭಿ, ಚೇತನ್ , ನಂದಕುಮಾರ್ , ರಾಖಿ ಇತರರು ಇದ್ದರು
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್