Categories: Blog

ಶಿವಮೊಗ್ಗ: ನೂತನ ಸುದ್ದಿವಾಹಿನಿ ಟಿವಿ12 ಕನ್ನಡ ರಾಜ್ಯಾದ್ಯಂತ ಏಕಕಾಲದಲ್ಲಿ ಲೋಕಾರ್ಪಣೆ

ಶಿವಮೊಗ್ಗ: 75ನೇ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ TV12 ಕನ್ನಡ ಸುದ್ದಿವಾಹಿನಿಯ “ಲೋಗೋ” ವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಸುನೀತಾ ಅಣ್ಣಪ್ಪ ರವರು ಜ್ಯೋತಿ ಬೆಳಗಿಸುವುದರ ಮೂಲಕ ಲೋಕಾರ್ಪಣೆ ಮಾಡಿದರು.

ನಗರದ ಮಥುರಾ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಟಿವಿ೧೨ ಕನ್ನಡ ಸುದ್ದಿ ವಾಹಿನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ರವರು ಶಾಸಕಾಂಗ,ಕಾರ್ಯಾಂಗ,ನ್ಯಾಯಾಂಗ ಹಾಗೂ ಪತ್ರೀಕಾರಂಗದ ಕ್ಷೇತ್ರವು ನಮ್ಮ ಸಾಮಾಜಿಕ ಕ್ಷೇತ್ರದ ಮೇಲೆ ಬಹಳಷ್ಟು ಪರಿಣಾಮ ಬೀರುವ ಕಾಲವಿದು.ವಿವಿಧ ಕ್ಷೇತ್ರಗಳ ಸುದ್ದಿಗಳನ್ನು ತತ್ ಕ್ಷಣವೇ ಎಲೆಕ್ಟ್ರಾನಿಕ್ ಮಾದ್ಯಮದ ಮೂಲಕ ಪಡೆಯಲು ಸಾಧ್ಯವಾಗಿದೆ.ಜನಸಾಮಾನ್ಯರನ್ನು ಗಮನದಲ್ಲಿಟ್ಟುಕೊಂಡು ಹೊಸ ರೀತಿಯ ಪ್ರಯತ್ನವನ್ನು ಕ್ರೀಯಾಶೀಲವಾಗಿ ಮಾಡುವ ಮೂಲಕ ನಿಮ್ಮ ಮಾಧ್ಯಮ ಜನರಿಗೆ ತಲುಪಲಿ,ಸಮಾಜದ ಪರಿವರ್ತನೆ ಆಗಲಿ ಎಂದು ಶುಭ ಹಾರೈಸಿದರು.

ಟಿವಿ12 ” ಲೋಗೋ” ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮತ್ತೊರ್ವ ಅತಿಥಿ ಆರಕ್ಷಕ ನಿರೀಕ್ಷಕರಾದ ಸತೀಶ್ ನಾಯ್ಕ್ ರವರು ಮಾತನಾಡಿ ಹೊಸ ವಾಹಿನಿ ಕನ್ನಡಿಗರ ಮನಸ್ಸನ್ನು ಗೆಲ್ಲುವ ಮೂಲಕ ಧೃಡವಾದ ಹೆಜ್ಜೆ ಇಡುವ ಹಾದಿಯಲ್ಲಿ ಸಾಗಲಿ,ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕಾರ್ಯ ಈ ಚಾನಲ್ ಮಾಡಲಿ ಎಂಬ ಮಹತ್ತರ ಆಶಯದೊಂದಿಗೆ ಶುಭ ಹಾರೈಸುತ್ತಿದ್ದೇನೆ ಎಂದರು.

ಟಿವಿ12 ಕನ್ನಡ ಸುದ್ದಿವಾಹಿನಿಯ ಶಿವಮೊಗ್ಗ ಜಿಲ್ಲಾ ಮುಖ್ಯ ವರದಿಗಾರರಾದ ರಫ಼ಿ ರಿಪ್ಪನ್ ಪೇಟೆ ಮಾತನಾಡಿ ಇತಿಹಾಸದಲ್ಲೆ ಪ್ರಥಮ ಬಾರಿಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲದಲ್ಲಿ ಟಿವಿ12 ಕನ್ನಡ ಸುದ್ದಿವಾಹಿನಿಯು ಲೋಕಾರ್ಪಣೆ ಆಗುತ್ತಿದ್ದು,ರಾಜ್ಯಾದ್ಯಂತ ಎಲ್ಲಾ ತಾಲೂಕಿನಲ್ಲಿಯು ವರದಿಗಾರರನ್ನು ಹೊಂದಿರುವ ಏಕೈಕ ವಾಹಿನಿ ಇದಾಗಿದೆ.ಮುಂದಿನ ದಿನಗಳಲ್ಲಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರಾದ ಎಂ ಡಿ ಚನ್ನಕೇಶವ್ ರವರ ಮಾರ್ಗದರ್ಶನದಲ್ಲಿ ಕನ್ನಡಿಗರ ಮನಸ್ಸನ್ನು ಗೆಲ್ಲುವಂತೆ ನಮ್ಮ ತಂಡ ಕಾರ್ಯನಿರ್ವಹಿಸುತ್ತದೆ ಎಂದರು.

ಈ ಸಂಧರ್ಭದಲ್ಲಿ ಹೊಸ ಚಿಗುರು ಸೇವಾ ಸಂಸ್ಥೆ ಮುಖ್ಯಸ್ಥರಾದ ಕೆ ಮುರುಗನ್,ಟಿವಿ12 ಜಿಲ್ಲಾ ಸಂಯೋಜಕರಾದ ವಿಜಯ್ ಗೌಳಿ,ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥರಾದ ಸೌಗಂಧಿಕ,ಸೂಡೂರು ಶಿವು ಹಾಗೂ ಟಿವಿ12 ತಾಲೂಕ್ ವರದಿಗಾರರುಗಳಾದ ನಾಗಕಿರಣ್ ಶೆಟ್ಟಿ, ಧರ್ಮರಾಜ್,ಪ್ರಶಾಂತ್ ಮೇಗರವಳ್ಳಿ,ವೆಂಕಟೇಶ್ ಸೊರಬ,ಹಾಗೂ ಈಶ್ವರ್ ಭದ್ರಾವತಿ ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

7 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago