ಶಿವಮೊಗ್ಗ ತಾಲ್ಲೂಕು ವ್ಯಾಪ್ತಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಭೂ ಮಾಫಿಯಾಗಳ ಹಾವಳಿ ತೀರಾ ಹಚ್ಚಾಗಿದ್ದು ಇದನ್ನ ತಡೆಯುವ ನಿಟ್ಟಿನಲ್ಲಿ ಉನ್ನತ ಮಟ್ಟದ ಪೊಲೀಸ್ ತಂಡವನ್ನ ರಚಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮೌನ ಪ್ರತಿಭಟನೆ ನಡೆಸಿದೆ.
ಶಿವಮೊಗ್ಗ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಏಕಾ ಏಕಿ ಭೂ ಮಾಫಿಯಾಗಳ ಹಾವಳಿ ಹೆಚ್ಚಾಗುತ್ತಿದ್ದು ಇದರ ಹಿಂದೆ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಶಾಮೀಲಾಗಿದ್ದಾರೆ.
ಪಾರ್ಕ್,ಸ್ಮಶಾನ,ರಸ್ತೆ, ಸೇರಿಂದತೆ ಹಲವು ಸರ್ಕಾರಿ ಜಾಗಗಳು ಈ ಭೂ ಮಾಫಿಯಾಗಳು ನಕಲಿ ದಾಖಲೆಗಳನ್ನ ಸೃಷ್ಟಿಸಿಕೊಂಡು ಕಬಳಿಸುತ್ತಿದ್ದು ಇದನ್ನ ತಡೆಯಬೇಕಾಗಿರೋ ಅಧಿಕಾರಿಗಳು ಕಣ್ಣು ಮುಚ್ಚಿ ಕೂತಿರೋದು ನೋಡಿದರೆ ಈ ಹಗರಣದಲ್ಲಿ ಅಧಿಕಾರಿಗಳು ನೇರವಾಗಿ ಶಾಮೀಲಾಗಿದ್ದಾರೆ ಅನ್ನೋ ಅನುಮಾನ ಮೂಡುತ್ತಿದೆ ಇದರೊಂದಿಗೆ ಜಿಲ್ಲೆಯ ಕೆಲ ಪ್ರಭಾವಿ ರಾಜಕಾರಣಿಗಳು ಇದಕ್ಕ ಕುಮ್ಮಕು ನೀಡಿದ್ದು ಅಧಿಕಾರಿಗಳು ಲಗಾಮಿಲ್ಲದೇ ಭೂ ಕಬಳಿಕೆಯಲ್ಲಿ ಶಾಮೀಲಾಗುತ್ತಿದ್ದಾರೆ.
ಈ ಹಿನ್ನಲೆ ಜಿಲ್ಲಾಧಿಕಾರಿಗಳು ಇಂಥ ಭೂ ಗಳ್ಳರನ್ನ ಹಿಡಿಯೋ ನಿಟ್ಟಿನಲ್ಲಿ ಕೂಡಲೆ ವಿಷೇಶ ಪೊಲೀಸ್ ತಂಡವನ್ನ ರಚಿಸಿ ತನಿಖೆಯನ್ನ ಪ್ರಾರಂಬಿಸಬೇಕು ಎಂದು ಒತ್ತಾಯಿಸುವುದಾಗಿ ಕರ್ನಾಟಕ ರಕ್ಷಣ ವೇಧಿಕೆ ಯುವಸೇನೆಯ ಕಿರಣ್ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಲಾಯಿತ್ತು.
ಈ ಸಂಧರ್ಭದಲ್ಲಿ ಕರವೇ ಮುಖಂಡರಾದ ಆರ್ ಶ್ರೀನಿವಾಸ್,ಮಧು ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್