Categories: Blog

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ

ಶಿವಮೊಗ್ಗ : ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲು ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ ಬಗ್ಗೆ ಪಾಲಿಕೆಯಾಗಲೀ ಜಿಲ್ಲಾಡಳಿತವಾಗಲಿ ಉಸ್ತುವಾರಿ ಸಚಿವರಾಗಲಿ ಗಮನ ಹರಿಸಿದಿರುವುದು ನಿಜಕ್ಕೂ ವಿಷಾದನೀಯ,ಈಗಾಗಲೇ ನಗರದ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆ 2 ವರ್ಷದಿಂದ ಅಗೆದು ಹಾಕಿ ಜನರಿಗೆ ತೊಂದರೆಯಾಗುವಂತೆ ಮಾಡಲಾಗಿದೆ ಎಂಜಿನಿಯರ್ ಮತ್ತು ಗುತ್ತಿಗೆದಾರರು ನೆನಪಾದಾಗ ಬಂದು ಅರೆಬರೆ ಕೆಲಸ ಮಾಡುತ್ತಾ ವಾಹನ ಸಂಚಾರರಿಗೆ ಮುಳುವಾಗಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಶನಿವಾರ ಗೋಪಾಳದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಂಗನಾಥ್ ಎನ್ನುವವರು ರಸ್ತೆಯ ಅವೈಜ್ಞಾನಿಕ ಕೆಲಸಕ್ಕೆ ಬಲಿಯಾಗಿದ್ದಾರೆ ಸ್ಮಾರ್ಟ್ ಸಿಟಿ ಪಡೆದ ಬಲಿಯಾಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಂಜಿನಿಯರ್ ಅವರನ್ನು ಅಮಾನತು ಮಾಡಬೇಕು.

 ಗುತ್ತಿಗೆದಾರರು ಸರಿಯಾಗಿ ಕೆಲಸ ನಿರ್ವಹಿಸದ ಕಾರಣ ನಿಗದಿತ ಸಮಯದಲ್ಲಿ ಮುಗಿಸದಿರುವುದರಿಂದ ತವರಲ್ಲೇ ಕಪ್ಪುಪಟ್ಟಿಗೆ ಸೇರಿಸಬೇಕು ಎನ್ನುವುದು ನಮ್ಮ ಸಂಘಟನೆಯ ಆಗ್ರಹವಾಗಿದೆ. ಇದರ ಜತೆಗೆ ಮೃತ ಶಿಕ್ಷಕನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರವನ್ನು ಕಟ್ಟಿಕೊಡಬೇಕು ಮೃತ ಶಿಕ್ಷಕರ ಪತ್ನಿಗೆ ಸರಕಾರಿ ಕೆಲಸ ಕೊಡಬೇಕು. 

ಸ್ಮಾರ್ಟ್ ಸಿಟಿಯ ಕೆಲಸದ ಸಂಬಂಧ ಸಭೆ ಕರೆದು ಕೂಡಲೇ ಕೆಲಸ  ನಿರ್ವಹಿಸಲು ಸೂಚಿಸಬೇಕು. ಮಳೆಯಿಂದ ಊರೆಲ್ಲಾ ಕೆಸರುಗದ್ದೆಯಾಗಿದೆ ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ಕೂಡಲೇ ಎಚ್ಚರಿಕೆ ನೀಡಿ ಸುಗಮ ಮತ್ತು ಉತ್ತಮ ಕಾರ್ಯನಿರ್ವಹಣೆಗೆ ಸೂಚಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಮುಂದಿನ ದಿನಗಳಲ್ಲಿ ಎಚ್ಚೆತ್ತು ಕೆಲಸ ಮಾಡದಿದ್ದಲ್ಲಿ ಸ್ಮಾರ್ಟ್ ಸಿಟಿ ಕಚೇರಿ ಎದುರು ಧರಣಿ ಹೂಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ನಾಜಿಮಾ,ನಗರ ಘಟಕದ ಅಧ್ಯಕ್ಷರಾದ ತಬಸ್ಸುಮ್ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಪ್ರೇಮಾ ಎನ್ ಶೆಟ್ಟಿ,ಕೌಸರ್ ಬಾನು,ಮೊಹನ್ ಮಾಲಾಸಿಂಗ್ ಮಂಜುಳಾ ಹಾಗೂ ಇನ್ನಿತರ ಪಧಾದಿಕಾರಿಗಳು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

4 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

4 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

5 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago