ಶಿವಮೊಗ್ಗ : ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲು ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ ಬಗ್ಗೆ ಪಾಲಿಕೆಯಾಗಲೀ ಜಿಲ್ಲಾಡಳಿತವಾಗಲಿ ಉಸ್ತುವಾರಿ ಸಚಿವರಾಗಲಿ ಗಮನ ಹರಿಸಿದಿರುವುದು ನಿಜಕ್ಕೂ ವಿಷಾದನೀಯ,ಈಗಾಗಲೇ ನಗರದ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆ 2 ವರ್ಷದಿಂದ ಅಗೆದು ಹಾಕಿ ಜನರಿಗೆ ತೊಂದರೆಯಾಗುವಂತೆ ಮಾಡಲಾಗಿದೆ ಎಂಜಿನಿಯರ್ ಮತ್ತು ಗುತ್ತಿಗೆದಾರರು ನೆನಪಾದಾಗ ಬಂದು ಅರೆಬರೆ ಕೆಲಸ ಮಾಡುತ್ತಾ ವಾಹನ ಸಂಚಾರರಿಗೆ ಮುಳುವಾಗಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಶನಿವಾರ ಗೋಪಾಳದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಂಗನಾಥ್ ಎನ್ನುವವರು ರಸ್ತೆಯ ಅವೈಜ್ಞಾನಿಕ ಕೆಲಸಕ್ಕೆ ಬಲಿಯಾಗಿದ್ದಾರೆ ಸ್ಮಾರ್ಟ್ ಸಿಟಿ ಪಡೆದ ಬಲಿಯಾಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಂಜಿನಿಯರ್ ಅವರನ್ನು ಅಮಾನತು ಮಾಡಬೇಕು.
ಗುತ್ತಿಗೆದಾರರು ಸರಿಯಾಗಿ ಕೆಲಸ ನಿರ್ವಹಿಸದ ಕಾರಣ ನಿಗದಿತ ಸಮಯದಲ್ಲಿ ಮುಗಿಸದಿರುವುದರಿಂದ ತವರಲ್ಲೇ ಕಪ್ಪುಪಟ್ಟಿಗೆ ಸೇರಿಸಬೇಕು ಎನ್ನುವುದು ನಮ್ಮ ಸಂಘಟನೆಯ ಆಗ್ರಹವಾಗಿದೆ. ಇದರ ಜತೆಗೆ ಮೃತ ಶಿಕ್ಷಕನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರವನ್ನು ಕಟ್ಟಿಕೊಡಬೇಕು ಮೃತ ಶಿಕ್ಷಕರ ಪತ್ನಿಗೆ ಸರಕಾರಿ ಕೆಲಸ ಕೊಡಬೇಕು.
ಸ್ಮಾರ್ಟ್ ಸಿಟಿಯ ಕೆಲಸದ ಸಂಬಂಧ ಸಭೆ ಕರೆದು ಕೂಡಲೇ ಕೆಲಸ ನಿರ್ವಹಿಸಲು ಸೂಚಿಸಬೇಕು. ಮಳೆಯಿಂದ ಊರೆಲ್ಲಾ ಕೆಸರುಗದ್ದೆಯಾಗಿದೆ ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ಕೂಡಲೇ ಎಚ್ಚರಿಕೆ ನೀಡಿ ಸುಗಮ ಮತ್ತು ಉತ್ತಮ ಕಾರ್ಯನಿರ್ವಹಣೆಗೆ ಸೂಚಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದರು.
ಮುಂದಿನ ದಿನಗಳಲ್ಲಿ ಎಚ್ಚೆತ್ತು ಕೆಲಸ ಮಾಡದಿದ್ದಲ್ಲಿ ಸ್ಮಾರ್ಟ್ ಸಿಟಿ ಕಚೇರಿ ಎದುರು ಧರಣಿ ಹೂಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ನಾಜಿಮಾ,ನಗರ ಘಟಕದ ಅಧ್ಯಕ್ಷರಾದ ತಬಸ್ಸುಮ್ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಪ್ರೇಮಾ ಎನ್ ಶೆಟ್ಟಿ,ಕೌಸರ್ ಬಾನು,ಮೊಹನ್ ಮಾಲಾಸಿಂಗ್ ಮಂಜುಳಾ ಹಾಗೂ ಇನ್ನಿತರ ಪಧಾದಿಕಾರಿಗಳು ಉಪಸ್ಥಿತರಿದ್ದರು.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…