Categories: Blog

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.
ನಂತರ ಮಾತನಾಡಿದ ಪುರಸಭೆ ಅಧ್ಯಕ್ಷರಾದ ಎಂ ಡಿ ಉಮೇಶ್ ರವರು  ಯುವ ನಾಯಕರು ಅಭಿವೃದ್ಧಿ ಹರಿಕಾರರು ಜನ ಸೇವಕರೂ ಆದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ದೊರೆಯಲಿ ಎಂದು ಆದಿ ದೇವರಾದ ಶ್ರೀ ರಂಗನಾಥ ಸ್ವಾಮಿಗೆ ಪೂಜೆ ಸಲ್ಲಿಸಿದೆವು ಎಂದರು.

ಪುರಸಭೆ ಉಪಾಧ್ಯಕ್ಷರಾದ ಮಧುರಾಯ್ ಜಿ ಶೇಟ್ ಮಾತನಾಡಿ ಎಸ್ ಆರ್ ಬೊಮ್ಮಾಯಿ ಅವರ ಸುಪುತ್ರರಾದ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ಕುಮಾರ್ ಬಂಗಾರಪ್ಪನವರಿಗೆ ನೀಡಿ ರಾಜ್ಯದ ಉದ್ಧಾರಕ್ಕಾಗಿ ಮತ್ತು ತಾಲ್ಲೂಕಿನ ಉದ್ಧಾರಕ್ಕಾಗಿ ಸಹಕರಿಸಬೇಕೆಂದು ಹೇಳಿದರು.

     ನಂತರ ಮಾತನಾಡಿದ ಬಿಜೆಪಿ ಮುಖಂಡರಾದ ಕಡಸೂರು ಶಿವಕುಮಾರ್ ರವರು ಯಡಿಯೂರಪ್ಪ ,ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಹಾಗೂ ಬಸವರಾಜ್ ಬೊಮ್ಮಾಯಿ ರವರಲ್ಲಿ ವಿನಂತಿಪೂರ್ವಕ ಮನವಿ ಮಾಡಿಕೊಳ್ಳುತ್ತೇವೆ ದಯವಿಟ್ಟು ಈ ಬಾರಿ ಕುಮಾರ್ ಬಂಗಾರಪ್ಪ ರವರಿಗೆ ಅವಕಾಶ ನೀಡಬೇಕು ಎಂದರು.

ಬಗರ್ ಹುಕುಂ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ ಚನ್ನಾಪುರ ರವರು ಮಾತನಾಡಿ  ಸೊರಬ ತಾಲ್ಲೂಕಿನ ಎಲ್ಲಾ ರೀತಿಯ ಜನಾಂಗದವರ ಅಭಿವೃದ್ಧಿಗೋಸ್ಕರ ಶಾಸಕರಿಗೆ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಲಿ ಎಂದು ಶ್ರೀರಂಗನಾಥ ಸ್ವಾಮಿಯನ್ನು ಪ್ರಾರ್ಥಿಸಿ ಕೊಂಡೆವು ಎಂದು ಹೇಳಿದರು

    ಈ ಸಂದರ್ಭದಲ್ಲಿ  ಈಶ್ವರ ಚನ್ನಪಟ್ಟಣ ರಾಜು ಕೆಂಚಿಕೊಪ್ಪ ಯೂಸುಫ್ ಸಾಬ್,ಪಾಂಡುರಂಗ,ಕನಕದಾಸಕಲ್ಲಂಬಿ,ಜಾನಕಪ್ಪ ಒಡೆಯರ್ಶಿ,ಶಿವು ಆಟೊ ಮತ್ತಿತರರು ಉಪಸ್ಥಿತರಿದ್ದರು.

ವರದಿ: ವೆಂಕಟೇಶ್ ಚಂದ್ರಗುತ್ತಿ





ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

4 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

5 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

6 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

8 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

9 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

9 hours ago