ಚಿತ್ರದುರ್ಗ: ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿ “ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ” ಪ್ರಶಸ್ತಿಗೆ ಚಿತ್ರದುರ್ಗದ ಸಾಹಿತಿಯಾದ ನಯನ ಕೋಟ ರವರು ಆಯ್ಕೆಯಾಗಿದ್ದಾರೆ. ಈ ಕುರಿತು ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಯನ ಕೋಟ ರವರು ಮೂಲತಃ ಉಡುಪಿ ಜಿಲ್ಲೆಯ ಕೋಟದವರು.ಪ್ರಸ್ತುತ 25 ವರ್ಷದಿಂದ ಚಿತ್ರದುರ್ಗದ ನಿವಾಸಿ. ಇವರ ತಾಯಿ ಸಾಹಿತಿ ನಾಗರತ್ನ ಬಿ(ವನಸುಮ ವಡ್ಡರ್ಸೆ) ಅವರಿಂದ ಪ್ರೇರಣೆ ಪಡೆದು 20 ವರ್ಷಗಳಿಂದ ಎಲೆಮರೆಯ ಕಾಯಿಯಂತೆ ಇದ್ದ ಇವರಿಗೆ ಹಲವಾರು ಬಳಗಗಳು ಸಾಹಿತ್ಯ ಕ್ಷೇತ್ರದಲ್ಲಿ ಬೆಳೆಯಲು ಅನುವು ಮಾಡಿಕೊಟ್ಟವು.
ಸಾಹಿತ್ಯದ ಹಲವಾರು ಪ್ರಕಾರಗಳಾದ ಕಥೆ,ಕವನ,ಲೇಖನ, ಗಜಲ್ ಹೀಗೆ ಇನ್ನೂ ಹಲವು ಪ್ರಕಾರಗಳಲ್ಲಿ ಬರೆದು ಬೆನ್ನು ತಟ್ಟಿಸಿಕೊಂಡವರು. ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದವರು.ಹಾಗೆಯೇ ರಾಷ್ಟ್ರಮಟ್ಟದ ಕವನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡವರು.
ಪ್ರಸ್ತುತ ಗುರುಕುಲ ಕಲಾ ಪ್ರತಿಷ್ಠಾನದ ಸಾಂಸ್ಕೃತಿಕ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸದಭಿರುಚಿಯ ಸಾಹಿತ್ಯದಲ್ಲಿ ಅಪಾರ ಆಸಕ್ತಿಯನ್ನು ಹೊಂದಿರುವರು.
ರಾಜ್ಯ ಮಟ್ಟದ ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿಗೆ ಆಯ್ಕೆಯಾದ ನಯನ ಕೋಟ ರವರಿಗೆ ಗುರುಕುಲ ಕಲಾ ಪ್ರತಿಷ್ಠಾನದ ಶಿವಮೊಗ್ಗ ಘಟಕದ ಅಧ್ಯಕ್ಷರಾದ ರಫಿ ರಿಪ್ಪನ್ ಪೇಟೆ ಹಾಗೂ ಬಂಧುಗಳು, ಹಿತೈಷಿಗಳು ಶುಭ ಕೋರಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್