Breaking
12 Jan 2026, Mon

ಸಾಹಿತಿ ಮೈನಾ ನಾಸಿರ್ ಕಾರ್ಗಲ್ ರವರಿಗೆ ಒಲಿದ ರಾಜ್ಯ ಮಟ್ಟದ ಗುರುಕುಲ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿ :

ಕಾರ್ಗಲ್: ಗುರುಕುಲಾ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದಗುರುಕುಲ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿಗೆ ಕಾರ್ಗಲ್ ನ ಸಾಹಿತಿ ಮೈನಾ ನಾಸಿರ್ ಕಾರ್ಗಲ್ ರವರು ಆಯ್ಕೆಯಾಗಿದ್ದಾರೆ.ಈ ಕುರಿತು ಗುರುಕುಲ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈನಾ ನಾಸಿರ್ ಕಾರ್ಗಲ್ ರವರು ಮೂಲತಃ ಉಡುಪಿ ತಾಲೂಕಿನ ಕೋಟಾದ ಸಮೀಪವಿರುವ ಮಧುವನದವರು. ಮದುವೆಯ ನಂತರ22 ವರ್ಷಗಳಿಂದ ಇವರು ಸಾಗರ ತಾಲೂಕಿನ ಜೋಗದ ಸಮೀಪವಿರುವ ಕಾರ್ಗಲ್ ನಲ್ಲಿ ವಾಸವಾಗಿರುತ್ತಾರೆ.

25 ವರ್ಷಗಳಿಂದಲೂ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಇವರ “ಮಧುವನ” ಕವನ ಸಂಕಲನ ನಾ ಡಿಸೋಜಾರವರ ಮುನ್ನುಡಿಯೊಂದಿಗೆ.. ಬಿಡುಗಡೆಯಾಗಿರುತ್ತದೆ. ಇವರು ಮೈಲಾಂಜಿ , ಮದರಂಗಿ ಮಾಸಪತ್ರಿಕೆಯ ಲೇಖಕಿ ಯಾಗಿದ್ದರು.

ಇವರು ಹಲವಾರು ಕಥೆ, ಕವನ, ಲೇಖನ, ಗಜಲ್, ಹನಿಕವನಗಳು, ಚುಟುಕುಗಳು, ನಾಟಕದಂತಹ ವಿವಿಧ ಸಾಹಿತ್ಯ ಪ್ರಕಾರಗಳನ್ನು ಬರೆದು ಸಾಹಿತ್ಯಕ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯಮಟ್ಟದ ಹಲವಾರು ಪ್ರಶಸ್ತಿಯನ್ನು ಪಡೆದುದಲ್ಲದೆ.. ರಾಷ್ಟ್ರಮಟ್ಟದ ಕವನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ.

ಗುರುಕುಲ ಪ್ರತಿಷ್ಠಾನದ ರಾಜ್ಯ ಮಹಿಳಾ ಪ್ರತಿನಿಧಿಯಾದ ಇವರಿಗೆ ಗುರುಕುಲ ಪ್ರತಿಷ್ಠಾನ ಶಿವಮೊಗ್ಗ ಘಟಕದ ಜಿಲ್ಲಾಧ್ಯಕ್ಷರಾದ ರಫಿ ರಿಪ್ಪನ್ ಪೇಟೆ ಶುಭ ಕೋರಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version