ಸೊರಬ: ಅಚ್ಚರಿಯ ಬೆಳವಣಿಗೆಯಲ್ಲಿ ಜಿಲ್ಲೆಯ ಸೊರಬ ಪುರಸಭೆ ಸದಸ್ಯರು ಪುರಸಭೆಯ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲೇರಿದ್ದಾರೆ.
ಸೊರಬ ಪುರಸಭ ಅಧ್ಯಕ್ಷ ಎಂ.ಡಿ.ಉಮೇಶ್ ಅವರ ನಡುವಳಿಕೆಯಿಂದ ಬೇಸತ್ತು ಇಂದು ಪುರಸಭೆಯ 11 ಜನ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲು ತಟ್ಟಿದ್ದಾರೆ.
12 ಜನ ಸದಸ್ಯರಿರುವ ಸೊರಬ ಪುರಸಭೆಯಲ್ಲಿ 6 ಜನ ಸದಸ್ಯರು ಬಿಜೆಪಿ ಪಕ್ಷದ ಸದಸ್ಯರಿದ್ದು 4 ಜನ ಕಾಂಗ್ರೆಸ್, ಒಬ್ಬರು ಜೆಡಿಎಸ್ ಒಬ್ಬರು ಪಕ್ಷೇತರರಿದ್ದಾರೆ. ವಿಪಕ್ಷ ನಾಯಕ ಪ್ರಸನ್ನ ಕುಮಾರ್ ದೊಡ್ಡಮನೆ ನೇತೃತ್ವದಲ್ಲಿ 11 ಜನ ಸದಸ್ಯರು ಪುರಸಭೆ ಅಧ್ಯಕ್ಷ ಉಮೇಶ್ ವಿರುದ್ಧ ಸಹಿ ಮಾಡಿ ಡಿಸಿಗೆ ನೀಡಿದ್ದಾರೆ.
ಉಮೇಶ್ ಅವರಿಗೆ 30 ತಿಂಗಳು ಅಂದರೆ ಎರಡು ವರೆ ವರ್ಷಕ್ಕೂ ಹೆಚ್ಚು ಅವಧಿ ನೀಡಲಾಗಿತ್ತು. ಆದರೆ 11 ತಿಂಗಳು ಅವಧಿ ಮುಗಿಸಿರುವ ಸೊರಬ ಅಧ್ಯಕ್ಷರಿಗೆ ಇನ್ನು 19 ತಿಂಗಳು ಬಾಕಿ ಇರುವಾಗಲೇ ಸದಸ್ಯರೆಲ್ಲಾ ಸೇರಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಮುಂದಾಗಿದ್ದಾರೆ.
ಸದಸ್ಯರ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನಗರಸಭೆಗೆ ಮನವಿ ನೀಡುವಂತೆ ಸೂಚಿಸಿದ್ದಾರೆ. ಈಗಾಗಲೇ ಸಾಗರದ ಎಸಿಗೂ 10 ಜನರ ಸಹಿ ಇರುವ ಪತ್ರವನ್ನು ನೀಡಿರುವುದಾಗಿ ಪುರಸಭೆ ವಿಪಕ್ಷ ನಾಯಕ ಪ್ರಸನ್ನ ಕುಮಾರ ದೊಡ್ಡಮನೆ ತಿಳಿಸಿದ್ದಾರೆ.
ವರದಿ : ವೆಂಕಟೇಶ್ ಚಂದ್ರಗುತ್ತಿ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್