ತೀರ್ಥಹಳ್ಳಿ : ಆರಗ ಜ್ಞಾನೇಂದ್ರ ರವರ ಹೇಳಿಕೆಯಿಂದ ತೀರ್ಥಹಳ್ಳಿಯ ಘನೆತೆಗೆ ಕುಂದು ಬರುತ್ತಿದೆ. ಅವರು ಪ್ರಭುದ್ಧತೆಯಿಂದ ಹೇಳಿಕೆಗಳನ್ನು ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರ ಹೇಳಿಕೆಯಿಂದ ಗೃಹ ಸಚಿವ ಸ್ಥಾನಕ್ಕೆ ಅರ್ಹರಲ್ಲ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ನವರನ್ನು ಗುರಿಯಾಗಿಟ್ಟುಕೊಂಡು ಹೇಳಿಕೆಗಳನ್ನು ನೀಡಬಾರದು. ರಾಜ್ಯದ 6 ಕೋಟಿ ಜನರನ್ನು ನೋಡಿಕೊಂಡು ಹೇಳಿಕೆಗಳನ್ನು ನೀಡಬೇಕು. ಅಧಿಕಾರದಲ್ಲಿದ್ದಾಗ ಒಂದು ಪಕ್ಷದ ಪರವಾಗಿ ಮಾತನಾಡಬಾರದು. ಕಾಂಗ್ರೆಸ್ನವರು ಅತ್ಯಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ಎಷ್ಟು ಸರಿ? ಎಂದು ಪ್ರಶ್ನಿಸಿದರು.
ಆರಗ ಜ್ಞಾನೇಂದ್ರ ಮೇಲೆಯೇ ಕೋಮುಗಲಭೆಯ 5 ಕೇಸ್ಗಳಿವೆ. ಕ್ರಿಮಿನಲ್ ಕೇಸ್ಗಳಿರುವ ಅವರು, ಅಪರಾಧಿ. ಅತ್ಯಾಚಾರಕ್ಕೂ, ಕಾಂಗ್ರೆಸ್ಗೂ ಏನು ಸಂಬಂಧವಿದೆ. ಅನಾವಶ್ಯಕವಾಗಿ ಹೇಳಿಕೆ ನೀಡಿ, ಅವರೇ ಮೈಮೇಲೆ ಎಳೆದುಕೊಂಡಿದ್ದಾರೆ. ಬಾಲಿಶ ಹೇಳಿಕೆಗಳನ್ನು ನೀಡಬಾರದು. ಬಂಗಾರದ ಅಂಗಡಿಗಳನ್ನು ಹಗಲು ಹೊತ್ತಿನಲ್ಲಿ ತೆರೆದಿರುತ್ತಾರೆ. ಹಗಲಿನಲ್ಲೇ ದರೋಡೆ ನಡೆಯುತ್ತೆ. ಹಾಗಂತ ಹಗಲು ಚಿನ್ನದಂಗಡಿ ಬಾಗಿಲು ತೆರೆಯಬಾರದಾ?. ಬಾಗಿಲು ಹಾಕಿಕೊಂಡೇ ಇರಿ ಎನ್ನಲು ಪೊಲೀಸ್ ವ್ಯವಸ್ಥೆ ಬೇಕಾ?. ಹೆಣ್ಣುಮಕ್ಕಳು ಮನೆಯಲ್ಲೇ ಇರಿ ಎನ್ನಲು ಪೊಲೀಸ್ ವ್ಯವಸ್ಥೆ ಬೇಕಾ ಎಂದು ಪ್ರಶ್ನಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್