ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ.
ಘಟನೆಯ ಹಿನ್ನೆಲೆ :
ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ ಆರನೇ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಫ್ಎಸ್ಎಲ್ ಲ್ಯಾಬ್ಗೆ ದೇಹದ ಅಂಗಾಂಗಗಳನ್ನು ಕಳುಹಿಸಲಾಗಿತ್ತು. ಈಗ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವವರದ್ದು ಎಂದು ಪೊಲೀಸರು ವರದಿ ನೀಡಿದ್ದಾರೆ.
ಆದರೆ ಶಶಿ ಪೋಷಕರು ಮಾತ್ರ ಇದನ್ನು ತಳ್ಳಿ ಹಾಕಿದ್ದಾರೆ. ಡಿಎನ್ಎ ವರದಿ ಬಂದಿದೆ. ಆರನೇ ಮೃತದೇಹ ನಮ್ಮ ಮಗನದ್ದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಸ್ಫೋಟಗೊಂಡ ಬಳಿಕ ಶಶಿ ತನ್ನ ಸ್ನೇಹಿತರಿಗೆ ಮಾತನಾಡಿದ್ದಾನೆ. ಸತ್ತವನು ಹೇಗೆ ಮಾತನಾಡಲು ಸಾಧ್ಯ? ಎಂದು ಪೋಷಕರು ಪ್ರಶ್ನೆ ಮಾಡಿದ್ದಾರೆ.
ದೇಹದ ಪತ್ತೆಗೆ ನಮಗೆ ಕರೆಸಿದ್ದಾಗ ನಾನು ಮೃತದೇಹ ನಮ್ಮ ಮಗನದ್ದಲ್ಲ ಎಂದರೂ ಸಹ ಪೊಲೀಸರು ಒಪ್ಪದೆ, ನಮ್ಮದೇ ಎಂದು ವಾದಿಸಿದ್ದರು. ಇದೀಗ ಮತ್ತೆ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ನಮ್ಮ ಮಗನ ಬಳಿ ಎರಡು ಫೋನ್ ನಂಬರ್ ಇತ್ತು. ಈ ಫೋನ್ ನಂಬರ್ಗಳ ಇನ್ ಕಮಿಂಗ್ ಮತ್ತು ಔಟ್ ಗೋಯಿಂಗ್ ಎರಡನ್ನೂ ಪರಿಶೀಲಿಸಿದ್ರೆ ಮಾಹಿತಿ ಸಿಗುತ್ತದೆ. ಆದರೆ ಇದನ್ನು ಪೊಲೀಸರು ಮಾಡುತ್ತಿಲ್ಲ. ಬದುಕಿರುವ ನಮ್ಮ ಮಗನನ್ನು ಪೊಲೀಸರೇ ಸಾಯಿಸುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…