Categories: Blog

‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ.

ಘಟನೆಯ ಹಿನ್ನೆಲೆ :

ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ ಆರನೇ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಫ್ಎಸ್ಎಲ್ ಲ್ಯಾಬ್​​​ಗೆ ದೇಹದ ಅಂಗಾಂಗಗಳನ್ನು ಕಳುಹಿಸಲಾಗಿತ್ತು. ಈಗ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವವರದ್ದು ಎಂದು ಪೊಲೀಸರು ವರದಿ ನೀಡಿದ್ದಾರೆ.

ಆದರೆ ಶಶಿ ಪೋಷಕರು ಮಾತ್ರ ಇದನ್ನು ತಳ್ಳಿ ಹಾಕಿದ್ದಾರೆ. ಡಿಎನ್​ಎ ವರದಿ ಬಂದಿದೆ. ಆರನೇ ಮೃತದೇಹ ನಮ್ಮ ಮಗನದ್ದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಸ್ಫೋಟಗೊಂಡ ಬಳಿಕ ಶಶಿ ತನ್ನ ಸ್ನೇಹಿತರಿಗೆ ಮಾತನಾಡಿದ್ದಾನೆ. ಸತ್ತವನು ಹೇಗೆ ಮಾತನಾಡಲು ಸಾಧ್ಯ? ಎಂದು ಪೋಷಕರು ಪ್ರಶ್ನೆ ಮಾಡಿದ್ದಾರೆ.

ದೇಹದ ಪತ್ತೆಗೆ ನಮಗೆ ಕರೆಸಿದ್ದಾಗ ನಾನು ಮೃತದೇಹ ನಮ್ಮ ಮಗನದ್ದಲ್ಲ ಎಂದರೂ ಸಹ ಪೊಲೀಸರು ಒಪ್ಪದೆ, ನಮ್ಮದೇ ಎಂದು‌ ವಾದಿಸಿದ್ದರು. ಇದೀಗ ಮತ್ತೆ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ನಮ್ಮ ಮಗನ ಬಳಿ ಎರಡು ಫೋನ್ ನಂಬರ್ ಇತ್ತು. ಈ ಫೋನ್ ನಂಬರ್​​​ಗಳ ಇನ್ ಕಮಿಂಗ್ ಮತ್ತು ಔಟ್ ಗೋಯಿಂಗ್ ಎರಡನ್ನೂ ಪರಿಶೀಲಿಸಿದ್ರೆ ಮಾಹಿತಿ ಸಿಗುತ್ತದೆ. ಆದರೆ ಇದನ್ನು ಪೊಲೀಸರು ಮಾಡುತ್ತಿಲ್ಲ. ಬದುಕಿರುವ ನಮ್ಮ ಮಗನನ್ನು ಪೊಲೀಸರೇ ಸಾಯಿಸುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

6 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago