ಕುಂಸಿ : ಬಹಿರ್ದೆಸೆಗೆ ತೆರಳಿದ್ದ ನಾಲ್ಕು ವರ್ಷದ ಮಗು ಸೋಮವಾರದಿಂದ ಕಾಣೆಯಾಗಿದ್ದು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಗುವಿನ ಕೊಲೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸೋಮವಾರದಂದು ಕಾಣೆಯಾಗಿದ್ದ ಮಗು ಇಂದು ಮುಂಜಾನೆ ಮನೆಯಿಂದ 1½ ಕಿಮಿ ದೂರದಲ್ಲಿ ಶವವಾಗಿ ಪತ್ತೆಯಾಗಿದೆ.
ಜಿಲ್ಲೆಯ ಗಡಿಭಾಗದ ರಟ್ಟೆಹಳ್ಳಿಯಲ್ಲಿ ಆ.30 ರಂದು ಸಂಜು ಎಂಬ ನಾಲ್ಕು ವರ್ಷದ ಮಗು ಸಂಜು ಬಹಿರ್ದೆಸೆಗೆ ಹೋಗಿದ್ದವರು ಮನೆಗೆ ವಾಪಾಸಾಗಿರಲಿಲ್ಲ. ಸಂಜೆಯ ವರೆಗೆ ಹುಡುಕಿದ ಪೋಷಕರು ಕೊನೆಯಲ್ಲಿ ಕುಂಸಿ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ.
ಆದರೆ ಇಂದು ರಟ್ಟೆಹಳ್ಳಿಯ ಮನೆಯಿಂದ 1½ ಕಿಮಿ ದೂರದಲ್ಲಿ ಮಗು ಹಳ್ಳವೊಂದರಲ್ಲಿ ಶವವಾಗಿ ಪತ್ತೆಯಾಗುತ್ತದೆ. ಮನೆಯವರು ಇದೊಂದು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಆ.30 ರಂದು ತಂದೆ ಬಸವರಾಜು ಶುಂಠಿ ನಾಟಿಕೆಲಸಕ್ಕೆ ಹೋದಾಗ ಮನೆಯಲ್ಲಿದ್ದ ಸಂಜು ಮನೆ ಪಕ್ಕದ ಬಯಲಿನಲ್ಲಿ ಬಹಿರ್ದೆಸೆಗೆ ತೆರಳಿದ್ದನು. ಮಗ ಬರುತ್ತಾನೆ ಎಂದು ಕಾದು ಕುಳಿತಿದ್ದ ಮಂಜುಳ ಮಗ 15 ನಿಮಿಷ ಕಳೆದರೂ ಬಾರದ ಹಿನ್ನಲೆಯಲ್ಲಿ ಆತಂಕಗೊಂಡು ಮಾಮೂಲಿ ಬಹಿರ್ದೆಸೆಗೆ ತೆರಳುವ ಜಾಗ ಪರಿಶೀಲಿಸಲು ಮುಂದಾಗಿದ್ದಾರೆ.ಕೆಲಸಕ್ಕೆ ಹೋಗಿದ್ದ ಬಸವರಾಜ್ ಮನೆಗೆ ಬಂದು ಮಗನನ್ನ ಹುಡುಕಲು ಮುಂದಾಗಿದ್ದಾರೆ. ಕೊನೆಯಲ್ಲಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇಂದು ಸಂಜು ಬೆಳಿಗ್ಗೆ 6-30 ಕ್ಕೆ ಹೆಣವಾಗಿ ಪತ್ತೆಯಾಗಿದ್ದಾನೆ. ಶವ ಸಿಕ್ಕಿದ ಸ್ಥಳ ಮನೆಯಿಂದ ಒಂದು ಕಿಮಿ ದೂರ ಇದೆ. ನೀರಿನ ಕಾನೆ ಇದೆ ಕಾನೆ ದಾಟಿ ಇಷ್ಟು ಸಣ್ಣ ಮಗು ಹೋಗಲು ಸಾಧ್ಯವಿಲ್ಲ. ಹಾಗಾಗಿ ಕೊಲೆಯಾಗಿದೆ ಎಂಬುದು ಪೋಷಕರ ಅನುಮಾನವಾಗಿದೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್