Categories: Blog

ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್

ಶಿವಮೊಗ್ಗ :  ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ ತರುವ ಬಗ್ಗೆ ಚರ್ಚೆ ಆಗಿದೆ. ಮತಾಂತರ ಕಾಯ್ದೆ ತರುವ ಮೊದಲು ಸದನದಲ್ಲಿ ವ್ಯಾಪಕ ಚರ್ಚೆ ಆಗಬೇಕು ಹಾಗೂ ಸಾರ್ವಜನಿಕ ಚರ್ಚೆಗೂ ಅವಕಾಶ ಮಾಡಿಕೊಡಬೇಕೆಂದು ರಾಜಶೇಖರ್ ಆಗ್ರಹಿಸಿದ್ದಾರೆ‌.

ಕ್ರೈಸ್ತರು ಭಾನುವಾರ ನಡೆಯುವ ಪ್ರಾರ್ಥನೆಗಳಲ್ಲಿ ತೊಡಗುತ್ತಾರೆ. ಆದರೆ ಈ ಪ್ರಾರ್ಥನೆಗಳ ಮೇಲೆ ಹಿಂದೂ ಪರ ಸಂಘಟನೆಗಳು ದಾಳಿ ಮಾಡಿದ್ದಾರೆ. ಪವಿತ್ರ ಸಂಸ್ಕಾರ ವಸ್ತುಗಳನ್ನ ಅಪವಿತ್ರಗೊಳಿಸಲಾಗಿದೆ. ಬೈಬಲ್ ಗ್ರಂಥಗಳನ್ನ ನಾಶಪಡಿಸಲಾಗಿದೆ.

ಆದರೆ ಇದುವರೆಗೂ ಕ್ರೈಸ್ತ ಸಮುದಾಯದ ಮೇಲೆ ಮತಾಂತರಗೊಳಿಸುವ ಆರೋಪಗಳು ಕೇಳಿ ಬರುತ್ತಿವೆಯೆ ಹೊರತು ಯಾವುದೇ ಆರೋಪಗಳು ಸಾಬೀತಾಗಿಲ್ಲ. ಈ ರೀತಿಯ ದಬ್ಬಾಳಿಕೆಗಳು ಮುಂದುವರೆದಲ್ಲಿ ಸಮುದಾಯ ಬೀದಿಗಿಳಿದು ಹೋರಾಡಲಿದೆ ಎಂದು ಎಚ್ಚರಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

18 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

21 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

22 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

23 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago