ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು.
ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್ ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು ಇವುಗಳ ಮಹತ್ವ ತಿಳಿಸಿದರು
ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ ಕಾವೇರಿ ಯವರು ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಕೊಡುವ ಪೌಷ್ಟಿಕ ಆಹಾರಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳ ಬೇಕು,ಗರ್ಭಿಣಿಯರಿಗೆ ಕೊಡುವ ಮೊಟ್ಟೆ ಮತ್ತು ಮೊಳೆಕೆ ಕಾಲುಗಳನ್ನ ಗರ್ಭಿಣಿಯರೇ ಉಪಯೋಗಿಸಿ ಪೌಷ್ಟಿಕ ಆಹಾರ ಘಟಕಕ್ಕೆ ನಾವೇ ಭೇಟಿಕೊಟ್ಟು ಪರಿಶುದ್ಧ ಕ್ವಾಲಿಟಿ ನೋಡಿ ನಾವು ವಿತರಿಸುತ್ತೇವೆ ಮತ್ತು ಚಂದ್ರಗುತ್ತಿ ಮಹಿಳಾ ಸಂಘಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದರು.
ಗ್ರಾಪಂ ಅಧ್ಯಕ್ಷರಾದ ರತ್ನಾಕರ್ ಮರಗೆಸ ಹುಳಿ ಟೊಮೆಟೊ ಅರಶಿಣ ಗಂಜಿ ಇದರ ಉಪಯೋಗದ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಕ್ಕೆ ಸ್ಥಳವನ್ನು ದಾನ ನೀಡಿದ ರತ್ನಾಕರ್ ನಾಯಕ್ ಅವರ ಕುಟುಂಬವನ್ನು ಸನ್ಮಾನಿಸಲಾಯಿತು.
ಗ್ರಾಪಂ ಸದ್ಯಸ್ಯರಾದ ರೇಣುಕಾ ಪ್ರಸಾದ್,ಸರಿತಾ ಕೃಷ್ಣ,
ಬಿಜೆಪಿ ಮುಖಂಡರಾದ ಪ್ರಸನ್ನ ಶೇಟ್ ಶಿಶು ಅಭಿವೃದ್ಧಿ ಅಧಿಕಾರಿ ಕಾವೇರಿ,ಮಹಿಳಾ ಮೇಲ್ವಿಚಾರಕಿ ಮಲ್ಲಮ್ಮ,ಪಿ ಡಿ ಓ ಈಶ್ವರಪ್ಪ
ಹಾಗೂ ಸನ್ಮಾನಿತರಾದ ರತ್ನಾಕರ್ ನಾಯಕ್ ಮತ್ತು ಕುಟುಂಬ,
ಅಂಗನವಾಡಿ ಶಿಕ್ಷಕಿ ರಾಧಾ ಹಾಗೂ ಜ್ಯೋತಿರ್ಮಾಲಾ ಮತ್ತು ಸಹಾಯಕರು ಆಶಾಕಾರ್ಯಕರ್ತೆಯರು ಮಹಿಳಾ ಸಂಘದ ಸದ್ಯಸ್ಯರು,ಗರ್ಭಿಣಿಯರು ಮಾತೆಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ::ವೆಂಕಟೇಶ್ ಚಂದ್ರಗುತ್ತಿ ಸೊರಬ
9845783961
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್