Categories: Blog

ತೀರ್ಥಹಳ್ಳಿ :ಸರ್ಕಾರದ ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ : ತಹಸೀಲ್ದಾರ್ ಡಾ. ಶ್ರೀಪಾದ್

ತೀರ್ಥಹಳ್ಳಿ : ಕೊರೊನಾ ಸೋಂಕಿನ ಸಂದರ್ಭದಲ್ಲಿ
ಗಣೇಶೋತ್ಸವ ಆಚರಣೆ ಅತ್ಯಂತ ಸರಳವಾಗಿ ಶ್ರದ್ಧಾ ಭಕ್ತಿ ಭಾವದಿಂದ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ಸರ್ಕಾರದ ಎಲ್ಲಾ ಮಾನದಂಡ
ಮತ್ತು.ಮಾರ್ಗಸೂಚಿ ಪಾಲಿಸಿ ಈ ಬಾರಿಯ
ಗಣೇಶೋತ್ಸವವನ್ನು ಆಚರಿಸಿ ಎಂದು ತೀರ್ಥಹಳ್ಳಿ
ತಹಶೀಲ್ದಾರ್‌ ಡಾ. ಶ್ರೀಪಾದರವರು ಗಣೇಶೋತ್ಸವ ಆಚರಣೆ ಮಾಡುವ ಸಮಿತಿಯವರಿಗೆ ಸೂಚನೆ ನೀಡಿದರು.

ಇಂದು ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪೋಲೀಸ್ ಇಲಾಖೆ ವತಿಯಿಂದ
ಕರೆಯಲಾಗಿದ್ದ ಗಣೇಶೋತ್ಸವ ಆಚರಣೆಯ ಕುರಿತಾದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು
ತಾಲ್ಲೂಕಿನಲ್ಲಿ ಕೊರೊನ ಸಾಂಕ್ರಾಮಿಕ ರೋಗದ ಹೆಚ್ಚಳ ಹಿನ್ನೆಲೆಯಲ್ಲಿ ಈ ಬಾರಿ ಗಣೇಶ ಉತ್ಸವವನ್ನು
ಅತ್ಯಂತ ಎಚ್ಚರಿಕೆಯಿಂದ ಆಚರಿಸುವ ಅವಶ್ಯಕತೆಯಿದ್ದು ಗಣಪತಿ ಪ್ರತಿಷ್ಠಾಪಿಸುವ
ಜಾಗಗಳಲ್ಲಿ ಭಕ್ತಾದಿಗಳಿಗೆ ವಿಶೇಷವಾದ ವ್ಯವಸ್ಥೆಗಳನ್ನು ಮಾಡಬೇಕು ಹೆಚ್ಚು ಜನ ಸೇರದಂತೆ ನಿಗಾ ವಹಿಸಬೇಕು ಕೊರೋನ ಮುಂಜಾಗೃತ ಕ್ರಮ ವಹಿಸಬೇಕು ಯಾವುದೇ ಮನರಂಜನಾ
ಮೆರವಣಿಗೆಗಳು ಕಾರ್ಯಕ್ರಮಗಳು ಹಮ್ಮಿಕೊಳ್ಳಬಾರದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಸಬಾರದು ಬದಲಾಗಿ
ಸ್ಥಳೀಯವಾಗಿ ರೈತರು ಬೆಳೆದಂಥ ಫಲವಸ್ತುಗಳನ್ನು ಪ್ರಸಾದ ರೂಪದಲ್ಲಿ ಹಂಚುವುದು ಸೂಕ್ತ ಹಾಗೆಯೇ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬೇಡಿ ಶ್ರದ್ಧಾ ಭಕ್ತಿಯಿಂದ ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಸರಳವಾಗಿ
ಗಣೇಶೋತ್ಸವ ಆಚರಿಸುವಂತೆ ತಾಲ್ಲೂಕು
ದಂಡಾಧಿಕಾರಿಗಳಾದ ಶ್ರೀಪಾದರವರು
ತಿಳಿಸಿದರು.

ಡಿಜೆ ಮೈಕ್ ಬಳಸುವಂತಿಲ್ಲ ಮೆರವಣಿಗೆ ಮಾಡುವಂತಿಲ್ಲ, ಪೊಲೀಸ್ ಇಲಾಖೆ ಅನುಮತಿ ಕಡ್ಡಾಯ-ಡಿವೈಎಸ್ಪಿ ಶಾಂತವೀರ

ಧಾರ್ಮಿಕ ಆಚರಣೆ ದೃಷ್ಟಿಯಿಂದ ಸರ್ಕಾರ ವಿಶೇಷ ತಜ್ಞರ ಶಿಫಾರಸನ್ನೊಳಗೊಂಡ ಸುಮಾರು ಹದಿನೇಳು ಮಾರ್ಗಸೂಚಿಗಳನ್ನು ಪ್ರಕಟಮಾಡಿ 5 ದಿನಗಳ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ್ದು ಇದಕ್ಕೆ
ಗಣಪತಿ ಪ್ರತಿಷ್ಠಾಪಿಸುವ ಎಲ್ಲಾ ಸಂಘ ಸಂಸ್ಥೆಯವರು ಸಹಕಾರ ಅಗತ್ಯವಾಗಿದೆ ಕೊರೊನ ಸಾಂಕ್ರಾಮಿಕ ರೋಗ ಎಲ್ಲೆಡೆ ವ್ಯಾಪಿಸುತ್ತಿದ್ದು ಈ ನಿಟ್ಟಿನಲ್ಲಿ ಸರ್ಕಾರ
ಹೊರಡಿಸಿರುವ ಎಲ್ಲ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಡಿವೈಎಸ್ಪಿ ಶಾಂತವೀರ ರವರು ಸೂಚಿಸಿದರು.

ಇನ್ನು ಯಾರೂ ಕೂಡ ಡಿಜೆ ಮೈಕ್ ಬಳಸಬಾರದು ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಮತ್ತು
ವಿಸರ್ಜಿಸುವಾಗ ಮೆರವಣಿಗೆ ಮಾಡುವಂತಿಲ್ಲ.
ಗುಂಪು ಗುಂಪಾಗಿ ಸೇರುವಂತಿಲ್ಲ ಸರ್ಕಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಸರಕಾರದ ನಿಯಮಗಳನ್ನು.ಉಲ್ಲಂಘಿಸಿದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾಗುತ್ತದೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ
ಎಲ್ಲರೂ ಕೂಡ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಪರವಾನಿಗೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಶಾಂತಿ
ಸೌಹಾರ್ದತೆಯಿಂದ ಗಣೇಶ ಹಬ್ಬದ ಆಚರಣೆಯನ್ನು ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ
ಕುರಿಯಾಕೋಸ್,ಪೋಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್,ಸಂತೋಷ್ ಕುಮಾರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು,ಗಣೇಶ ಸಂಸ್ಥೆಯ ಎಲ್ಲ ಪದಾಧಿಕಾರಿಗಳು,ತಾಲ್ಲೂಕಿನ ಹಿರಿಯನಾಗರಿಕರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

4 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

10 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago