Categories: Blog

ಪ್ರಧಾನಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದು ಯುವಕಾಂಗ್ರೆಸ್ ವತಿಯಿಂದ ಅಂಚೆಕಚೇರಿ ಎದುರು ಬೃಹತ್ ಪ್ರತಿಭಟನೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರಾರು ಜನರಿಗೆ ಅನ್ನಕ್ಕೆ ದಾರಿದೀಪವಾಗಿದ್ದ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಗಳನ್ನ ಸರ್ಕಾರಿ ಖಾಸಗಿಯವರಿಗೆ ನೀಡಲು ಮುಂದಾಗಿದೆ ಈಗಾಗಲೆ ಇದನ್ನ ನಂಬಿಕೊಂಡಿದ್ದ ಸಾವಿರಾರು ಬಡಕಾರ್ಮಿಕರ ಕುಟುಂಭ ಬೀದಿಗೆ ಬಿದ್ದಿದೆ. ಈ ಕಾರಣ ಇದನ್ನ ಸರ್ಕಾರ ಪುನಸ್ಚೇತನ ಗೊಳಿಸುವುದರ ಬದಲೂ ಖಾಸರಿಗಯವರಿಗೆ ನೀಡುವು ಹುನ್ನಾರ ನಡೆಸಿದೆ. ಈ ಕೆಲಸವನ್ನ ಕೂಡಲೇ ಕೈ ಬಿಡಬೇಕು ಹಾಗೂ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಯನ್ನ ಉಳಿಸಬೇಕಿದೆ ಎಂದು ಒತ್ತಾಯಿಸಿ ಇಂದು ಯುವ ಕಾಂಗ್ರೆಸ್‌ ಮುಖಂಡ ಗಣೇಶ್‌ ನೇತೃತ್ವದಲ್ಲಿ ಪತ್ರಚಳುವಳಿಯನ್ನ ನಡೆಸಲಾಯಿತ್ತು.

ಇಂದು ಶಿವಮೊಗ್ಗದ ಮುಖ್ಯ ಅಂಚೇ ಕಛೇರಿಯ ಎದುರು ನೂರಾರು ಸಂಖ್ಯೆಯಲ್ಲಿ ಸೇರಿದ ಕಾಂಗ್ರೆಸ್‌ ಕಾರ್ಯಕತ್ರರು ಪತ್ರ ಚಳುವಳಿಯ ಮೂಲಕ ಜಿಲ್ಲೆಯ ಎರಡು ಪ್ರಮುಖ ಕಾರ್ಖಾನೆಯಾಗಿರೋ ಎಂ.ಪಿ.ಎಂ ಹಾಗೂ ವಿ.ಐ.ಎಸ್‌.ಎಲ್‌. ಕಾರ್ಖಾನೆ ಮುಚ್ಚುವ ಸ್ಥೀತಿಗೆ ತಲುಪಿದ್ದು. ಇದಕ್ಕೆ ಕಾರಣ ಕೆಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ಗಣೇಶ್‌ ಆರೋಪಿಸಿದ್ದಾರೆ. ಖಾಸಗಿಯವರೊಂದಿಗೆ ಪರೋಕ್ಷವಾಗಿ ಕೈ ಜೋಡಿಸಿರೋ ಅವರ ಲಾಭಿಗೆ ಮಣಿದಿದೆ ಹಿಂದೆ ಇದ್ದ ಸಿದ್ಧರಾಮಯ್ಯನವರ ಸರ್ಕಾರ ಈ ಕಾರ್ಖಾನೆಗಳ ಉಳಿವಿಗಾಗಿ ಮೈನಿಂಗ್‌ ನಡೆಸಲು ಭೂಮಿಯನ್ನ ನೀಡಿತ್ತು.
ಆದರೆ ಸಧ್ಯ ಶಿವಮೊಗ್ಗ ಸಂಸದರಾಗಿರೋ ಬಿ.ವೈ ರಾಘವೇಂದ್ರ ಕೇಂದ್ರದ ಸಚಿವರನ್ನ ಈ ಕಾರ್ಖಾನೆಗಳಿಗೆ ಕರೆತರುತ್ತಿರೋದು ಕೇವಲ ಪ್ರದರ್ಶನಕ್ಕಾಗಿ ಮಾತ್ರ ಎನ್ನುವಂತಾಗಿದ್ದು ವಿ.ಐ.ಎಸ್‌.ಎಲ್‌ ಉಳಿವಿಗೆ ಒಂದಿಚ್ಚು ಮೈನಿಂಗ್‌ ಭೂಮಿಯನ್ನ ನೀಡಿಲ್ಲಾ. ಹಾಗೂ ಲೋಕಸಭೆಯಲ್ಲಿ ಚರ್ಚೆ ನಡೆಯುವ ಸಮಯಲ್ಲಿ ಈ ವಿಷಯವಾಗಿ ಒಂದು ಮಾತನ್ನು ಆಡಿಲ್ಲಾ ಇದರೊಂದಿಗೆ ಸ್ವಥಹಾ ಇವ ತಂದೇ ಬಿ.ಎಸ್.ಯಡಿಯೂರಪ್ಪನವರು 4 ಬಾರಿ ಮುಖ್ಯಮಂತ್ರಿಯಾಗಿದ್ದರು ಈ ಕಾರ್ಖಾನೆಯ ಉಳಿವಿಗೆ ಯಾವುದೇ ಕ್ರಮಗಳನ್ನ ತೆಗೆದುಕೊಂಡಿಲ್ಲಾ ಎಂದು ಆರೋಪ ಮಾಡಿದರು.

ಕರ್ನಾಟಕ ಸರ್ಕಾರದ ಸುರ್ಪದಿಯಲ್ಲಿದ್ದ ಕಾರ್ಖಾನೆಯಲ್ಲಿ ಇನ್ನಷ್ಟು ಉತ್ತುಂಗ ಸ್ಥಿತಿಗೆ ಕೊಂಡೊಯ್ಯಬಹುದೆಂಬ ದೃಷ್ಟಿಯಿಂದ ಕೇಂದ್ರ ಸರ್ಕಾರದ ವಿಐಎಸ್ಎಲ್ ನಲ್ಲಿ ವಿಲೀನಗೊಳಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಕಾರ್ಖಾನೆಯನ್ನು ಉತ್ತುಂಗದ ಸ್ಥಿತಿಗೆ ಕೊಂಡೊಯ್ಯುವ ಬದಲಾಗಿ ನಷ್ಟದಲ್ಲಿ ದೂಡಲಾಗಿದೆ .ಸರ್ಕಾರ ನಷ್ಟದ ನೆಪವೊಡ್ಡಿ ಕಾರ್ಖಾನೆ ಮುಚ್ಚಲು ಹುನ್ನಾರ ನಡೆಸುತ್ತಿರುವುದನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ.

ಸರ್ಕಾರಿ ಸ್ವಾಮ್ಯದಲ್ಲಿರುವ ಕಾರ್ಖಾನೆಗೆ ಸರ್ಕಾರ ಸ್ವಂತ ಗಣಿ ಒದಗಿಸಲು ಮೀನಮೇಷ ಎಣಿಸುತ್ತಿರುವ ವಲ್ಲದೆ ಹಂತಹಂತವಾಗಿ ಕಾರ್ಖಾನೆಯಲ್ಲಿ ಸ್ಥಗಿತಗೊಳಿಸುವುದಲ್ಲದೆ ಉದ್ಯೋಗಗಳನ್ನು ಕಡಿತಗೊಳಿಸುತ್ತಿವೆ.ಇದು ಕಾರ್ಖಾನೆಯನ್ನು ಸಂಪೂರ್ಣ ಮುಚ್ಚುವ ಹುನ್ನಾರವಾಗಿದೆ.ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗವಕಾಶಗಳ ಸೇವಾ ಕೇಂದ್ರ ಸ್ಥಾಪನೆಗೆ ಪೂರಕವಾದ ಬೇರೆ ಬೇರೆ ಉದ್ಯಮಗಳು ಬೆಳೆದು ಬಂದಿದ್ದವು.
ಆದರೆ ಇದೀಗ ಅವಲಂಬಿತ ಎಲ್ಲ ಉದ್ಯಮಗಳು ನೆಲಕಚ್ಚಿವೆ ಆರ್ಥಿಕ ಚಟುವಟಿಕೆ ಕುಂಠಿತವಾಗುತ್ತಿದೆ.

ಕೇಂದ್ರ ಸರಕಾರ ಕೂಡಲೇ ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಯ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಕಾರ್ಖಾನೆಗೆ ಸ್ವಂತ ಗಣಿ ಒದಗಿಸುವುದರ ಜತೆಗೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿ ಉಳಿಸಿಕೊಂಡು ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸುವ ಮೂಲಕ ಜಿಲ್ಲೆಯ ಆರ್ಥಿಕ ಪ್ರಗತಿಗೆ ಸಹಕರಿಸಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಹಾಗೂ ಎಂಪಿಎಂ ಉಳಿವಿಗಾಗಿ ನಡೆಸುತ್ತಿದ್ದೇವೆ ಎಂದರು.

ವಿಐಎಸ್ಎಲ್ ಹಾಗೂ ಎಂಪಿಎಂ ಉಳಿವಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಕಾರ್ಖಾನೆಯ ಉಳಿವಿಗಾಗಿ ನಡೆಯುತ್ತಿರುವ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

49 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago