ಶಿವಮೊಗ್ಗ:ಯುವಕನೊಬ್ಬ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ ಕಾರಣ ಮುಗ್ಧ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಬದುಕಿ ಬಾಳಬೇಕಾಗಿದ್ದ ಯುವತಿಯು ಮದುವೆಗೆ ಮೊದಲೇ ಗರ್ಭವತಿಯಾಗಿ ಮಗುವಿನೊಂದಿಗೆ ತಾಯಿಯೂ ಅಸುನೀಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಕುಂಸಿಯ ಅಶ್ವಿನಿಗೆ ಭದ್ರಾವತಿ ಮೂಲದ ಬಸವರಾಜ್ ಎಂಬ ಯುವಕನೊಂದಿಗೆ ಪರಿಚಯವಾಗಿ ಇಬ್ಬರಲ್ಲೂ ಪ್ರೇಮಾಂಕುರವಾಗುತ್ತದೆ.ನಂತರ ಬಸವರಾಜ್ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿದ್ದನು. ಮನೆಯಲ್ಲಿ ತಾನು ಗರ್ಭವತಿ ಎಂದು ಹೇಳಿಕೊಳ್ಳದ ಅಶ್ವಿನಿ ಹೊಟ್ಟೆ ಮುಂದೆ ಬಂದಿರುವುದು ಗ್ಯಾಸ್ಟ್ರಿಕ್ ನಿಂದ ಎಂದು ಸಾಗು ಹಾಕಿದ್ದಳು.
ಏಳು ತಿಂಗಳಿಗೆ ಪ್ರಸವಪೂರ್ವ ಗರ್ಭಪಾತವಾಗಿ ಬ್ಲೀಡಿಂಗ್ ಆಗಿದೆ. ಭಾನುವಾರ ಬೆಳಿಗ್ಗೆ ಮೆಗ್ಗಾನ್ ಗೆ ಬಂದು ಅಶ್ವಿನಿ ದಾಖಲಾಗಿದ್ದಾಳೆ. ಆದರೆ ಏಳು ತಿಂಗಳ ಮಗು ಹೊಟ್ಟೆಯೊಳಗೆ ಅಸುನೀಗಿದ್ದು ನಂತರ ಚಿಕಿತ್ಸೆ ಫಲಕಾರಿಯಾಗದೇ ಅಶ್ವಿನಿ ಕೂಡಾ ಮೃತಪಟ್ಟಿದ್ದಾಳೆ.
ಯುವತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವ ವಿಷಯ ಅಶ್ವಿನಿ ಕುಟುಂಬದವರೆಗೆ ತಿಳಿದೇ ಇರಲಿಲ್ಲ. ಪೊಲೀಸರಿಂದ ಕುಟುಂಬಕ್ಕೆ ಮಾಹಿತಿ ಸಿಕ್ಕಿದೆ.
ಅಶ್ವಿನಿ ಹಾಗೂ ಆಕೆಯ ಏಳು ತಿಂಗಳಿನ ಮಗುವಿನ ಸಾವಿಗೆ ಕಾರಣನಾದ ಬಸವರಾಜ್ ಹಾಗು ಮತ್ತಿಬ್ಬರು ಯುವಕರನ್ನು ಬಂಧಿಸಲು ಕುಂಸಿ ಪೊಲೀಸರು ಬಲೆ ಬೀಸಿದ್ದಾರೆ.
ವರದಿ : ದೇವರಾಜ್ ಆರಗ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್