ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್ ಗ್ರಾಮದ ಕಿರಣ್ ಹಾಗೂ ಶಶಾಂಕ್ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.
ಶಿವಮೊಗ್ಗದ ಎಡುಕೇರ್ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ ಕಿರಣ್ ಹಾಗೂ ಶಶಾಂಕ್ ಭದ್ರಾನದಿಯಲ್ಲಿ ಈಜಲು ನೀರಿಗೆ ಇಳಿದಿದ್ದಾರೆ, ದುರದೃಷ್ಟವೆಂದರೆ ಇಬ್ಬರಿಗೂ ಈಜಲು ಬರುತ್ತಿರಲಿಲ್ಲ ಎಂದು ಹೇಳಲಾಗುತ್ತಿದೆ.
ಅಣೆಕಟ್ಟಿನ ಬುಡದಲ್ಲಿ ನೀರಿನ ಸೆಳೆತ ಹಾಗೂ ಆಳ ಇರುವುದನ್ನು ಗಮನಿಸದ ಈ ವಿದ್ಯಾರ್ಥಿಗಳು ಒಬ್ಬರ ಹಿಂದೆ ಒಬ್ಬರು ಸ್ನೇಹಿತರ ಕಣ್ಣೇದುರಿಗೆ ನೀರು ಪಾಲಾಗಿದ್ದಾರೆ. ಈ ಘಟನೆ ನಡೆದ ತಕ್ಷಣ ಅಲ್ಲಿನ ಗ್ರಾಮಸ್ಥರು ಉಳಿದವರ ನೆರವಿಗೆ ಧಾವಿಸಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದರು.
ಮಾನವೀಯತೆ ಮೆರೆದ ಗ್ರಾಮಸ್ಥರು;
ಈ ಘಟನೆಯ ಮಾಹಿತಿ ತಿಳಿದ ಗೊಂದಿ ಗ್ರಾಮಸ್ಥರು ತಂಡೋಪ ತಂಡವಾಗಿ ಅಣೆಕಟ್ಟಿನ ಆಸುಪಾಸಿನಲ್ಲಿ ಜಮಾವಣೆಗೊಂಡು, ಇಂತಹ ದುರ್ಘಟನೆ ಈ ಭಾಗದಲ್ಲಿ ಎಂದೂ ನಡೆದಿರಲಿಲ್ಲ ಎಂದು ಪಶ್ಚತ್ತಾಪ ಪಟ್ಟಿದ್ದಾರೆ, ಅಲ್ಲದೆ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ನೀರಿನಲ್ಲಿ ಇಳಿದು ಶವ ತೆಗೆಯಲು ಮೀನಾಮೇಷ ಎಣಿಸುತ್ತಿರುವಾಗ ಗ್ರಾಮಸ್ಥರೇ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳ ಶವ ತೆಗೆದು ಮಾನವೀಯತೆ ಮೆರೆದಿದ್ದಾರೆ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್