ಭದ್ರಾವತಿ : ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಭದ್ರಾವತಿಯ ಮುಂದಿನವಿಧಾನ ಸಭೆಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಪ್ಪಾಜಿ ಗೌಡರ ಪತ್ನಿ ಶಾರದ ಅಪ್ಪಾಜಿಗೌಡರನ್ನೇ ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಅವರು ಭದ್ರಾವತಿ ತಾಲೂಕು ಗೋಣಿಬೀಡುವಿನಲ್ಲಿರುವ ಅಪ್ಪಾಜಿಗೌಡರ ತೋಟದಲ್ಲಿ ಅವರ ಪುಣ್ಯಸ್ಮರಣೆಯ ದಿನದಂದು ಪ್ರತಿಮೆಯನ್ನ ಅನಾವರಣಗೊಳಿಸಿ ಮಾಧ್ಯಮದವರ ಜೊತೆ ಮಾತನಾಡಿದರು.
ಭದ್ರಾವತಿಯ ಅಪ್ಪಾಜಿ ಗೌಡರ ಅಭಿಮಾನಿಗಳು ಯಾರನ್ನು ಅಭ್ಯರ್ಥಿಯನ್ನ ನೇಮಿಸಬೇಕೆಂದು ತೀರ್ಮಾನಿಸಿದ್ದಾರೆ. ಅದರಲ್ಲಿ ಯಾವುದೇ ಬದಲಾವಣೆಗಳಿಲ್ಲ. ಗೌಡರ ಕುಟುಂಬದ ಏಳಿಗೆಗೆ ಶ್ರಮವಹಿಸಿರುವ ಶ್ರಮ ವರ್ಗ ಏನಿದೆ ಅವರ ಸಹಮತದೊಂದಿಗೆ ಜೊತೆಯಲ್ಲಿ ಚರ್ಚಿಸಿ ಮುಂದಿನ ವಿಧಾನ ಸಭೆಯ ಚುನಾವಣೆಯಲ್ಲಿ ಭದ್ರಾವತಿಯ ಜೆಡಿಎಸ್ ಅಭ್ಯರ್ಥಿಯಾಗಿ ಶಾರದ ಅಪ್ಪಾಜಿ ಗೌಡರನ್ನು ಚುನಾವಣೆಗೆ ನಿಲ್ಲಿಸಲು ಪಕ್ಷ ನಿರ್ಧರಿಸಿದೆ.
ಸೆ.27 ರಂದು ಬೆಂಗಳೂರು ಬಿಡದಿಯಲ್ಲಿ ಪಕ್ಷದ ಕಾರ್ಯಗಾರ ಏರ್ಪಡಿಸಲಾಗಿದೆ. 140 ಮುಂದಿನ ವಿಧಾನ ಅಭ್ಯರ್ಥಿಗಳ ಪ್ರಥಮ ಹಂತದ ಕಾರ್ಯಗಾರ ನಡೆಯಲಿದೆ. ಅಲ್ಲಿ ಎಲ್ಲ ವಿಷಯಗಳನ್ನ ಚರ್ಚಿಸಲಾಗುವುದು ಎಂದರು.
ಮಾಧ್ಯಮದವರು ಧಾರ್ಮಿಕ ಕಟ್ಟಡ ತೆರವುಗೊಳಿಸಿರುವ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಕುಮಾರ ಸ್ವಾಮಿ, ಬಿಜೆಪಿ ಪಕ್ಷ ಒಂದೆಡೆ ಹಿಂದುತ್ವದ ಹೆಸರು ಹೇಳುತ್ತಾರೆ. ಮತ್ತೊಂದೆಡೆ ಅವರ ಸರ್ಕಾರದಲ್ಲಿ ದೇವಸ್ಥಾನ ಒಡೆದು ವಿದೇಯಕ ತರಲು ಹೊರಟಿದ್ದಾರೆ.
ಈ ಮೊದಲೆ ಸರ್ಕಾರ ಎಚ್ಚೆತ್ತುಕೊಂಡಿದ್ದಲ್ಲಿ ಅವರ ನಿಜವಾದ ನಿಲುವಾದ ಹಿಂದುತ್ವ ರಕ್ಷಣೆ ಮಾಡುವ ನಡೆ ಏನಿತ್ತು ಅದನ್ನ ಕಾಪಾಡಿಕೊಂಡು ಹೋಗಬಹುದಿತ್ತು. ಆದರೆ ಈ ವಿಷಯದಲ್ಲಿ ಬಿಜೆಪಿ ಎಡವಿದೆ. ಇದರಿಂದ ಹೊಸ ಡ್ರಾಮ ಆರಂಭಿಸಿದೆ ಎಂದು ಆರೋಪಿಸಿದರು.
ಭದ್ರಾವತಿಯ ಸಣ್ಣ ಕುಟುಂಬದಲ್ಲಿ ಹುಟ್ಟಿ ಕಾರ್ಮಿಕ ಜೀವನ ನಡೆಸಿದ ಅಪ್ಪಾಜಿ ಗೌಡರ ಪ್ರಥಮ ವರ್ಷದ ಪುಣ್ಯಸ್ಮರಣೆಯನ್ನ ಅಭಿಮಾನಿಗಳು ನೆರವೇರಿಸುತ್ತಿದ್ದಾರೆ ಅದರಲ್ಲಿ ಭಾಗಿಯಾಗಿದ್ದೇನೆ. ಹಲವಾರು ಮಠಾಧೀಶರ ಸಾನಿಧ್ಯದಲ್ಲಿ, ಹಲವಾರು ರಾಜಕೀಯ ಮುಖಂಡರ ನೇತೃತ್ವದಲ್ಲಿ ಪ್ರತಿಮೆ ಆನಾವರಣಗೊಳಿಸಲಾಗಿದೆ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್