ಶಿವಮೊಗ್ಗ : ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ, ಬಂದ್ ಯಶಸ್ವಿಗೊಳಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಶಿವಮೊಗ್ಗದ ರೈತ ಸಂಘದ ಅಧ್ಯಕ್ಷ ಬಸವರಾಜಪ್ಪ ತಿಳಿಸಿದರು.
ಕೇಂದ್ರದ ಕೃಷಿ ಕಾಯ್ದೆಗಳನ್ನು ಮರಳಿ ಹಿಂಪಡೆಯುವಂತೆ ಹಾಗೂ ಸರ್ಕಾರಿ ಕಂಪನಿಗಳನ್ನು ಖಾಸಗೀಕರಣ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗವನ್ನು ಸಹ ಬಂದ್ ಮಾಡಿ ಬೆಂಬಲ ಸೂಚಿಸಲಾಗುವುದು ಎಂದು ಗೌರವಾಧ್ಯಕ್ಷ ಹೆಚ್ ಬಸವರಾಜ್ ತಿಳಿಸಿದರು. ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ ಎಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ಈ ನಡೆಯನ್ನು ಹತ್ತಿಕ್ಕಬೇಕು ಎಂದರು. ಎಪಿಎಂಸಿ ದುರ್ಬಲಗೊಳಿಸಲಾಗಿದೆ. ಕೃಷಿ ಭೂಮಿ ಗುತ್ತಿಗೆ ವ್ಯವಸ್ಥೆ ಸರಿಯಲ್ಲ. ಉದಾರೀಕರಣ, ಜಾಗತೀಕರಣದ ದುಷ್ಪರಿಣಾಮವನ್ನು ಇಂದಿಗೂ ರೈತರು ಅನುಭವಿಸುತ್ತಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಎರಡನೇ ಸ್ವಾತಂತ್ರ್ಯದ ಚಳುವಳಿ ನಡೆಯುತ್ತಿದೆ. ಅದನ್ನು ನಾವು ಯಶಸ್ವಿಗೊಳಿಸಬೇಕಿದೆ ಎಂದು ರೈತರಿಗೆ ಕರೆ ನೀಡಿದರು.
ಶಿವಮೊಗ್ಗವನ್ನು ಬೆಳಗ್ಗೆ ಆರು ಘಂಟೆಯಿಂದ ಸಂಜೆ ನಾಲ್ಕರವರೆಗೆ ಬಂದ್ ಮಾಡಲಾಗುತ್ತದೆ ಈ ಸಮಯದಲ್ಲಿ ಆಟೋ ಚಾಲಕರು, ಬೀದಿ ಬದಿಯ ವ್ಯಾಪಾರಿಗಳು ಹಾಗೂ ಉಳಿದ ಇನ್ನಿತರ ಕ್ಷೇತ್ರದ ವ್ಯಾಪಾರಿಗಳು ಈ ಬಂದ್ ನ ಯಶಸ್ಸಿಗೆ ಕಾರಣರಾಗಬೇಕು ಎಂದು ಅವರು ತಿಳಿಸದರು. ಹಲವಾರು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದೆ ಎಂದು ಈ ಸಮಯದಲ್ಲಿ ತಿಳಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್