Categories: Blog

ಯಶಸ್ವಿನಿ ಯೋಜನೆಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗಳಿಗೆ ರೈತ ಸಂಘದಿಂದ ಮನವಿ:

ಶಿವಮೊಗ್ಗ: ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪರವರು ಇಂದು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿಯವರನ್ನು ‌ಭೇಟಿ ಮಾಡಿ ಗಾಂಧಿ ಕಥನ ಪುಸ್ತಕವನ್ನು ನೀಡಿ ಅಭಿನಂದಿಸಿದರು.


ಈ ಸಂಧರ್ಭದಲ್ಲಿ ರೈತರ ಆಶಾಕಿರಣವಾದ ಯಶಸ್ವಿನಿ ಯೋಜನೆಯಿಂದ ಸಾಕಷ್ಟು ಬಡ ರೈತರಿಗೆ ಅನುಕೂಲವಾಗಿತ್ತು. ಆದ್ದರಿಂದ ಯಶಸ್ವಿನಿ ಯೋಜನೆಯನ್ನು ಮುಂದುವರಿಸವಂತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಭದ್ರಾ ನದಿಯಿಂದ 12.5TMC ತುಂಗಾ ನದಿಯಿಂದ 17.4TMC ನೀರೆತ್ತಿ ಕೊಡಲು DPR ಆಗಿ ಕಾಮಗಾರಿ ಪ್ರಗತಿಯಲ್ಲಿದೆ, ಆದರೆ ಭದ್ರಾ ಅಣೆಕಟ್ಟು ನಿರ್ಮಾಣವಾಗಿ 58 ವರ್ಷಗಳಲ್ಲಿ ಕೇವಲ 23 ಬಾರಿ ತುಂಬಿದೆ. ಬರಗಾಲದ ಬೇಸಿಗೆಯ ವರ್ಷಗಳಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ಜನ-ಜಾನುವಾರುಗಳಿಗೆ ಕುಡಿಯಲು ಸಹ ನೀರಿಲ್ಲದೆ, ತೋಟಗಳು ಸಹ ಒಣಗಿ ಹೋಗಿ ಬೆಳೆದು ನಿಂತ ಮರಗಳನ್ನು ಕಡಿಯುವಂತ ಪರಿಸ್ಥಿತಿಗಳನ್ನು ಎದುರಿಸಿದ್ದೇವೆ. ಆದ್ದರಿಂದ ಭದ್ರಾ ನದಿಯಿಂದ 12.5TMC ನೀರೆತ್ತವ ಬದಲಾಗಿ ತುಂಗಾ ನದಿಯಿಂದಲೇ ಸಂಪೂರ್ಣ 29.9 TMC ನೀರನ್ನು ತುಂಗಾ ನದಿಯಿಂದಲೇ ನೀರೆತ್ತಲು ಹೊಸದಾಗಿ DPR ಮಾಡಿ ಆದೇಶ ಹೊರಡಿಸಬೇಕಾಗಿ ಕೋರಿದರು.

ಜೊತೆಗೆ ರೈತರಿಗೆ ಸರ್ಕಾರಿ ಕಛೇರಿಗಳಲ್ಲಿ ಕೆಲಸಗಳು ಆಗದೆ ತಿಂಗಳುಗಟ್ಟಲೇ ಅಲೆದಾಡುವತಾಂಗಿದೆ ಹಾಗೂ ರೈತರ ಇನ್ನೂ ಅನೇಕ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

23 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

23 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

24 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago