ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ, ಸರಳ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಮನೋರಂಜನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಮನೆ, ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಗಲ್ಲಿಗೊಂದರಂತೆ ಗಣೇಶ ಕೂರಿಸುವುದಕ್ಕೆ ಅನುಮತಿ ನೀಡಿಲ್ಲ. ಕೊರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುವ ಸಾಧ್ಯತೆಯಿದೆ.
ಗಣೇಶೋತ್ಸವಕ್ಕೆ ಸರ್ಕಾರದ ಷರತ್ತುಗಳೇನು..?
-ಮೆರವಣಿಗೆ ಮಾಡುವುದಕ್ಕೆ ಕಡ್ಡಾಯವಾಗಿ ನಿಷೇಧ
-ಬೃಹತ್ ಗಣಪತಿ ಪ್ರತಿಷ್ಟಾಪನೆಗೆ ಅವಕಾಶವಿಲ್ಲ
-ಡಿಜೆ ಬಳಸುವುದಕ್ಕೆ ಅನುಮತಿ ಇಲ್ಲ
-ಸರಳವಾಗಿ ಗಣೇಶ ಹಬ್ಬ ಆಚರಣೆಗೆ ಅವಕಾಶ
-ಮನೋರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ
-ನಿಗದಿತ ಸ್ಥಳಗಳಲ್ಲಿ ಮಾತ್ರ ವಿಸರ್ಜನೆಗೆ ಅವಕಾಶ
-ಆರ್ಕೆಸ್ಟ್ರಾ, ಸಂಗೀತ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ
-5 ದಿನ ಮಾತ್ರ ಗಣೇಶೋತ್ಸವ ಆಚರಣೆಗೆ ಅವಕಾಶ
-ಸಾರ್ವಜನಿಕವಾಗಿ ಮೆರವಣಿಗೆ ಮಾಡುವಂತಿಲ್ಲ
-ಸಂಜೆ ಗಣೇಶೋತ್ಸವ ಮಾರ್ಗಸೂಚಿ ಬಿಡುಗಡೆ
-ಸಾರ್ವಜನಿಕ ಗಣೇಶೋತ್ಸವದಲ್ಲಿ 50 ಮಂದಿಗೆ ಅವಕಾಶ
-ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲಿ ಮಾತ್ರ ಗಣೇಶ ವಿಸರ್ಜನೆ
-ಬಿಬಿಎಂಪಿ ಸೂಚಿಸಿದ ಸ್ಥಳಗಳಲ್ಲಿ ಮಾತ್ರ ಗಣೇಶ ವಿಸರ್ಜನೆ
-ಗಲ್ಲಿಗೊಂದರಂತೆ ಗಣೇಶಮೂರ್ತಿ ಪ್ರತಿಷ್ಠಾಪನೆ ಇಲ್ಲ
-ಮನೆ, ದೇಗುಲಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ
-ಗಣೇಶೋತ್ಸವದಲ್ಲಿ ಜನಸಂದಣಿ ಸೇರುವಂತಿಲ್ಲ
-ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್