Headlines

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ ಪೆಟ್ಟಾದ ಪರಿಣಾಮ ರಿಪ್ಪನ್ ಪೇಟೆಯ ಸರ್ಕಾರಿ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗೆ ದಾಖಲಿಸಿ ಹೆಚ್ವಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ಕಳುಹಿಸಿಕೊಡಲಾಗಿದೆ.

ರಿಪ್ಪನ್ ಪೇಟೆ ವಾಸಿ ಮುಸ್ತಫಾ ಕೋಣಂದೂರಿನಲ್ಲಿ ಮೊಬೈಲ್ ಶಾಪ್ ನಡೆಸುತ್ತಿದ್ದು,ಶಾಪ್ ಮುಚ್ಚಿ ಮನೆಗೆ ಹಿಂತಿರುಗುವ ವೇಳೆ ಈ ದುರ್ಘಟನೆ ನಡೆದಿದೆ.
ಕಾರ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

Exit mobile version