ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದೆ. ಸದ್ಯ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ಷಾಂತರ ರೂ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದೆ.
ಈ ಕುಟುಂಬದಲ್ಲಿ ಲಕ್ಷಾಂತರ ವೆಚ್ಚ ಪಾವತಿಸಲು ಆರ್ಥಿಕವಾಗಿ ಬಲಹೀನರಾಗಿದ್ದಾರೆ.ಸಹೃದಯಿ ದಾನಿಗಳು ಈ ಬಡ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ನೆರವಾದಿತು ಮಾತ್ರವಲ್ಲ ಅವರಿಗೆ ಮಾನಸಿಕ ಸ್ಥೈರ್ಯ ತುಂಬಲು ಸಾಧ್ಯವಿದೆ.ಯಾರಾದರೂ ದಾನಿಗಳು ಸಹಾಯಕ್ಕೆ ಮುಂದಾದರೆ ಸಾಕು ಅನ್ನುವಂಥ ಪರಿಸ್ಥಿತಿಯಲ್ಲಿ ಈ ಕುಟುಂಬ ಈಗ ಪರಿತಪಿಸುತ್ತಿದೆ.ಜನಪ್ರತಿನಿಧಿಗಳು ಹಾಗೂ ನೆರೆಹೊರೆಯವರು ಸಾವು ಬದುಕಿನ ಮದ್ಯ ಹೋರಾಡುತ್ತಿರುವ ಮಗುವಿಗೆ ನೆರವಾಗಬೇಕು ಎಂದು ಈ ಕುಟುಂಬ ಸಹಾಯ ಯಾಚಿಸುತ್ತಿದೆ.
ಭರತ್ ಅವರ ತಂದೆ ಶಬರೀಶ ನಗರ ವಾಸಿ ಗಣೇಶ್ (ಗಣಿ) ಇವರು ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೋಮ್ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯಾರಾದರೂ ಈ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವವರು ಈ ಖಾತೆ ಸಂಖ್ಯೆ ಹಾಗೂ ಗೂಗಲ್ ಪೇ ಸಂಖ್ಯೆಯನ್ನು ಸಂಪರ್ಕಿಸಿ.ತಮ್ಮ ಕೈಲಾದ ಸಹಾಯ ಮಾಡಿ
ಹೆಸರು -ಭರತ್
ಕೆನರಾ ಬ್ಯಾಂಕ್ ಖಾತೆ ನಂ : 0534119019211
IFSC ಕೋಡ್ -CNRB0000534
ಬ್ರಾಂಚ್ -ರಿಪ್ಪನ್ ಪೇಟೆ
ಫೋನ್ ಪೇ/ ಗೂಗಲ್ ಪೇ -8971421052
ಹೆಚ್ಚಿನ ಮಾಹಿತಿಗೆ ಈ ನಂಬರ್ ಗೆ ಕರೆ ಮಾಡಿ : 8971421052
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್