Categories: Blog

ರಿಪ್ಪನ್ ಪೇಟೆ : ನವಜಾತ ಶಿಶುವಿನ ಚಿಕಿತ್ಸೆಗೆ ಸಹಾಯಧನ ನೀಡಿ ಕುಟುಂಬಕ್ಕೆ ನೆರವಾದ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ವೈಯಕ್ತಿಕ ಧನ ಸಹಾಯ ಮಾಡಿ ಕುಟುಂಬಕ್ಕೆ ಧೈರ್ಯ ತುಂಬಿದರು.

ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ಷಾಂತರ ರೂ ವೆಚ್ಚವಾಗಲಿದೆ ಎಂದು ಕುಟುಂಬ ಅಳಲು ತೋಡಿಕೊಂಡಿತ್ತು.

ಈ ಕುಟುಂಬದಲ್ಲಿ  ಲಕ್ಷಾಂತರ ವೆಚ್ಚ ಪಾವತಿಸಲು ಆರ್ಥಿಕವಾಗಿ ಬಲಹೀನರಾಗಿದ್ದಾರೆ.ಸಹೃದಯಿ ದಾನಿಗಳು ಈ ಬಡ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ನೆರವಾದಿತು ಮಾತ್ರವಲ್ಲ ಅವರಿಗೆ ಮಾನಸಿಕ ಸ್ಥೈರ್ಯ ತುಂಬಲು ಸಾಧ್ಯವಿದೆ ಎಂದು ಪೋಸ್ಟ್ ಮ್ಯಾನ್ ನ್ಯೂಸ್ ಕೆಲದಿನಗಳ ಹಿಂದೆ “ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಸುಗೂಸು : ಸಹಾಯಕ್ಕಾಗಿ ಯಾಚನೆ” ಅಡಿ ಬರಹದಲ್ಲಿ ಸುದ್ದಿ ಪ್ರಕಟಿಸಿತ್ತು.ಇದಕ್ಕೆ ಸ್ಪಂದಿಸಿರುವ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಇಂದು ಶಬರೀಶ ನಗರದ ಮಗುವಿನ ಮನೆಗೆ ತೆರಳಿ ಕುಟುಂಬಕ್ಕೆ ಧೈರ್ಯ ತುಂಬಿ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.

ಈ ಸಂಧರ್ಭದಲ್ಲಿ ಅರಸಾಳು ಗ್ರಾ ಪಂ ಅಧ್ಯಕ್ಷರಾದ ಉಮಾಕರ, ಅರಸಾಳು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮಂತ.ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಚಂದ್ರೇಶ್, ಮುಖಂಡರು ಗಳಾದ ಕೆರೆಹಳ್ಳಿ ರವೀಂದ್ರ,ಉಲ್ಲಾಸ್,ಫ಼್ಯಾನ್ಸಿ ರಮೇಶ್,ನಾಗಪ್ಪ,ಖಲೀಲ್ ಗಾಳಿಬೈಲ್,ಡಿಕೆಶಿ ಅಭಿಮಾನಿ ಬಳಗದ ಅಧ್ಯಕ್ಷ ವಾಸು ಹಾಗೂ ಇನ್ನಿತರರಿದ್ದರು.



ಯಾರಾದರೂ ಈ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವವರು ಈ ಖಾತೆ ಸಂಖ್ಯೆ ಹಾಗೂ ಗೂಗಲ್ ಪೇ ಸಂಖ್ಯೆಯನ್ನು ಸಂಪರ್ಕಿಸಿ.ತಮ್ಮ ಕೈಲಾದ ಸಹಾಯ ಮಾಡಿ


ಹೆಸರು -ಭರತ್

ಕೆನರಾ ಬ್ಯಾಂಕ್ ಖಾತೆ ನಂ : 0534119019211

IFSC ಕೋಡ್ -CNRB0000534

ಬ್ರಾಂಚ್ -ರಿಪ್ಪನ್ ಪೇಟೆ


ಫೋನ್ ಪೇ/ ಗೂಗಲ್ ಪೇ -8971421052

ಹೆಚ್ಚಿನ ಮಾಹಿತಿಗೆ ಈ ನಂಬರ್ ಗೆ ಕರೆ ಮಾಡಿ : 8971421052
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

4 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

10 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago