Categories: Blog

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ ಬಂದಿರುವುದಿಲ್ಲ, ಎರಡು ದಿನ ನೆಂಟರಿಷ್ಟರ ಮನೆಯಲ್ಲಿ ಹುಡುಕಾಟ ನಡೆಸಿ ನಂತರ ರಿಪ್ಪನ್ ಪೇಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.

                        [ ನಾಪತ್ತೆಯಾಗಿರುವ ಜಾಫರ್]



ಜಾಫರ್ ಕಾಣೆಯಾದ ದಿನದಂದೆ ರಿಪ್ಪನ್ ಪೇಟೆ ಚೌಡೇಶ್ವರಿ ಬೀದಿಯ ನಿವಾಸಿ ಸಾಜಿದ ಎಂಬ ಮಹಿಳೆಯು ಕೂಡ ನಾಪತ್ತೆಯಾಗಿದ್ದಾರೆ  ಎಂದು ಪತ್ನಿ ನಜ್ಮಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪರಸ್ತ್ರೀಯೊಂದಿಗೆ ಪರಾರಿಯ ಶಂಕೆ !! :
ಮೂಲತಃ ಕೆಂಚನಾಲ ನಿವಾಸಿಯಾದ ಜಾಫರ್ 13 ವರ್ಷಗಳ ಹಿಂದೆ ಪಟ್ಟಣದ ಗಾಂಧಿನಗರ ವಾಸಿ ನಜ್ಮಾರವರನ್ನು ವಿವಾಹವಾಗಿ ರಿಪ್ಪನ್ ಪೇಟೆಯಲ್ಲೇ ವಾಸವಿರುತ್ತಾರೆ.
ಈಗ  ಪರಸ್ತ್ರಿ ಮೋಹಕ್ಕೆ ಬಿದ್ದು ನನಗೆ ಮತ್ತು ನನ್ನ ಮೂವರು ಮಕ್ಕಳಿಗೆ ಮೋಸ ಮಾಡಿ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಜಾಫರ್ ಪತ್ನಿ ನಜ್ಮಾ ಆರೋಪಿಸುತ್ತಿದ್ದಾರೆ.

ಸಾಜಿದ ಎಂಬ ಮಹಿಳೆಯು ಕೂಡ ಪತಿಯಿಂದ ದೂರ ಉಳಿದು ಒಂಟಿಯಾಗಿ ಜೀವನ ಸಾಗಿಸುತಿದ್ದರು, ಜಾಫರ್ ಇವರ ಮೋಹದ ಬಲೆಗೆ ಬಿದ್ದು ವಿಚ್ಚೇದನ ಕೂಡ ಪಡೆಯದೇ ಪತ್ನಿ ಹಾಗು ಮುದ್ದಾದ ಮೂರು ಮಕ್ಕಳಿಗೆ ದ್ರೋಹ ಮಾಡಿ ಪರಾರಿಯಾಗಿದ್ದಾರೆ ಎಂದು ನಜ್ಮಾ ಸಂಬಂದಿಕರು ಆರೋಪಿಸಿದ್ದಾರೆ.

ನನ್ನ ಪತಿಯನ್ನು ದಯವಿಟ್ಟು ಹುಡುಕಿ ಕೊಡಿ ಎಂದು ನಜ್ಮಾ ಅಂಗಲಾಚುತ್ತಿರುವುದು ಎಂತಹ ಕಲ್ಲು ಹೃದಯವನ್ನು ಕರಗಿಸುವಂತಹ ಸನ್ನಿವೇಶವಾಗಿದೆ.ಪತಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆಯವರು ವಿಳಂಬ ಮಾಡಿದಲ್ಲಿ ಮಹಿಳಾ ಆಯೋಗದ ಮೊರೆ ಹೋಗುವುದಾಗಿಯು ಈ ಸಂಧರ್ಭದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಚಾರವನ್ನು ಅರಿಯದ ಮುದ್ದಾದ ಮೂರು ಕಂದಮ್ಮಗಳು ನಮ್ಮ ಅಪ್ಪ ಮನೆಗೆ ಬಾರದೇ ತುಂಬಾ ದಿನವಾಯಿತು ನೀವಾದರು ಕರೆದುಕೊಂಡು ಬನ್ನಿ ಪ್ಲೀಸ್ ಎಂದು ಹೇಳುವಾಗ ಎದೆ ಸೀಳಿದಂತ ಭಾಸವಾಗುತ್ತದೆ.

    { –ತಂದೆಯ ಬರುವಿಕೆಗೆ ಕಾಯುತ್ತಿರುವ ಕಂದಮ್ಮಗಳು-}



ಸಂಬಂಧಪಟ್ಟ ಪೊಲೀಸ್ ಇಲಾಖೆ ಆದಷ್ಟು ಬೇಗ ಜಾಫರ್ ನನ್ನು ಪತ್ತೆ ಹಚ್ಚಿ ಅನ್ಯಾಯಕ್ಕೆ ಒಳಗಾಗಿರುವ ಮಹಿಳೆಗೆ ಸೂಕ್ತವಾದ ನ್ಯಾಯ ಒದಗಿಸಿಕೊಡಬೇಕಾಗಿದೆ.




ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ನಿರಂತರ ಸ್ಥಳೀಯ ಸುದ್ದಿಗಳನ್ನು ಫೇಸ್‌ಬುಕ್‌ ನಲ್ಲಿ ಪಡೆಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

40 minutes ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

54 minutes ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

8 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

12 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

12 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

24 hours ago