ರಿಪ್ಪನ್ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪುನರ್ ನಾಮಕರಣಗೊಳಿಸುವಂತೆ ಆಗ್ರಹಿಸಿ 30 ಗ್ರಾಮಗಳಲ್ಲಿ ಸಾರ್ವಜನಿಕ ಸಹಿ ಸಂಗ್ರಹಣ ಅಭಿಯಾನಕ್ಕೆ ರಿಪ್ಪನ್ಪೇಟೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಮತ್ತು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಇಂದು ಸಾರ್ವಜನಿಕರ ಸಹಿ ಸಂಗ್ರಹಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಹೊಸನಗರ ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆಯಿಂದ ತಾಲೂಕಿನ ಅಭಿವೃದ್ದಿ ಮಾಡಲು ಸಾಧ್ಯವಾಗುತ್ತದೆ.ಒಂದು ತಾಲೂಕ್ಕಿಗೆ ಇಬ್ಬಿಬ್ಬರು ಶಾಸಕರಾಗಿ ಅಭಿವೃದ್ಧಿ ಕಾರ್ಯಗಳು ಕನಸಿನ ಮಾತಾಗಿದೆ.ನಮ್ಮ ತಾಲೂಕ್ಕಿಗೆ ವಿಧಾನಸಭಾ ಕ್ಷೇತ್ರ ಕೇಳುವುದು ನಮ್ಮ ಹಕ್ಕು ,ಇಲ್ಲದಿದ್ದಲ್ಲಿ ಹೊಸನಗರ ತಾಲೂಕ್ ನ ಹೋಬಳಿಗಳು ತೀರ್ಥಹಳ್ಳಿ-ಸಾಗರ ವಿಧಾನಸಭಾ ಕ್ಷೇತ್ರಗಳ ನಡುವೆ ಹಂಚಿಹೋಗಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತದೆ ಎಂದರು.
ಈ ಹಿಂದೆ ಇದ್ದಂತೆ ನಮ್ಮ ಹೊಸನಗರ ಕ್ಷೇತ್ರವನ್ನು ಪುನರ್ ನಾಮಕರಣ ಮಾಡುವಂತೆ ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದಾಗಿ ತಾಲ್ಲೂಕಿನ 30 ಗ್ರಾಮ ಪಂಚಾಯತಿಗಳಿಗೆ ಸಹಿ ಸಂಗ್ರಹಣೆಗೆ ತೆರಳುವುದಾಗಿ ತಿಳಿಸಿ ಇಂದಿನಿಂದ ರಿಪ್ಪನ್ಪೇಟೆಯಿಂದ ಆರಂಭಿಸಲಾಗುತ್ತಿದೆ ಎಂದರು.
ರೈಲು ನಿಲುಗಡೆಗೊಳಿಸಲು ಸಾಧ್ಯವಾಗದಿದ್ದಲ್ಲಿ ಬಿ ವೈ ರಾಘವೇಂದ್ರ ರಾಜಿನಾಮೆ ನೀಡಲಿ :
ಬ್ರಿಟಿಷರ ಕಾಲದಲ್ಲಿ ಆರಂಭಗೊಂಡ ಅರಸಾಳು ರೈಲ್ವೆ ನಿಲ್ದಾಣಕ್ಕೆ ಅದರದೇ ಆದ ಇತಿಹಾಸ ಇದೆ. ಅರಸಾಳು ರೈಲ್ವೇ ನಿಲ್ದಾಣದಲ್ಲಿ ಎಲ್ಲಾ ರೀತಿಯ ಸವಲತ್ತು ಇದ್ದರೂ ಇಲ್ಲಿ ರೈಲ್ವೇ ನಿಲುಗಡೆ ಮಾಡದೇ ಇರುವುದರ ಹಿಂದೆ ದುರುದ್ದೇಶವಿದೆ.ಶಿವಮೊಗ್ಗ–ತಾಳಗುಪ್ಪ– ಬೆಂಗಳೂರು ರೈಲು ಈ ಹಿಂದೆ ಇಲ್ಲಿ ನಿಲುಗಡೆಗೊಳಿಸುತ್ತಿದ್ದು ಕೊರೊನಾ ಕಾಲದಲ್ಲಿ ಸ್ವಲ್ಪ ದಿನ ತೊಂದರೆಯಾಗಿತ್ತು.ಈ ಹಿಂದೆ ಸಂಸದರಿಗೆ ಮನವಿ ಮಾಡಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಒಂದು ವೇಳೆ ಸಂಸದರಿಗೆ ರೈಲು ನಿಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಈ ಕೂಡಲೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ರಿಪ್ಪನ್ಪೇಟೆಯ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಮತ್ತು ಜೆಡಿಎಸ್ ಮುಖಂಡ ಆರ್.ಎ.ಚಾಬುಸಾಬ್ ಈ ಸಂದರ್ಭದಲ್ಲಿ ಆಗ್ರಹಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್