Categories: Blog

ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್

ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.

ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.  

ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ ದೇವರುಗಳಾಗಿದ್ದಾರೆ. ಜ್ಞಾನ ಸಂಪತ್ತು ಎಂಬುದು ಅಂಗಡಿಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ವಸ್ತು ಅಲ್ಲ. ಬದಲಾಗಿ ಶ್ರದ್ಧೆ, ಶ್ರಮದಿಂದ ಪಡೆಯುವುದಾಗಿದೆ ಎಂದರು.

ಸಮಾಜ ಸುಧಾರಣೆಯಲ್ಲಿ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದಾಗಿದ್ದು, ಶಿಕ್ಷಕರಿಗೆ ನಿವೃತ್ತಿ ಎಂಬುದಿಲ್ಲ. ಶಿಕ್ಷಕರು ಎಂದಿಗೂ ಅಮರ. ತಮ್ಮ ಜವಾಬ್ದಾರಿಗಳನ್ನು ಅರಿತು ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಹಾದಿಯಲ್ಲಿ ಎಲ್ಲರೂ ಸಾಗಿ ಶಿಕ್ಷಕ ವೃತ್ತಿಯ ಘನತೆ, ಗೌರವಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳಬೇಕೆಂದು ಕರೆ ನೀಡಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾ ಹಣಾಧಿಕಾರಿ ರಮೇಶ್, ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ, ನಗರಸಭಾ ಸದಸ್ಯರಾದ ಸರ್ವಮಂಗಳ, ರಿಯಾಜ್ ಅಹ್ಮದ್, ಮುಖಂಡರಾದ ಎಸ್.ಎಸ್ ಭೈರಪ್ಪ,  ಶಿಕ್ಷಕರಾದ ಹರಿಬಾಬು, ಎಂ.ಎಸ್ ಬಸವರಾಜ್, ಎಸ್.ಪಿ ಮೋಹನ್, ಹನುಮಂತು, ಸುಮತಿ ಕಾರಂತ್, ಎಂ.ಸಿ ಆನಂದ್, ಸಿ. ಜಯಪ್ಪ, ನಗರಸಭೆ ಪರಿಸರ ಇಂಜಿನಿಯರ್ ಪ್ರಭಾಕರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್ ಮತ್ತಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

4 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

10 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago