ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.
ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ.
ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರು ಊರುಗಡೂರು ಮತ್ತು ಸೂಳೆಬೈಲಿನವರು ಎಂದು ತಿಳಿದು ಬಂದಿದೆ.
ಪ್ಲಂಬರ್ ಕೆಲಸ ಮಾಡುತ್ತಿದ್ದ ಶೇಖ್ ಅಹಮದ್, ಮೊಹಮದ್ ಮುಸ್ತಫಾ, ಪೇಂಟರ್ ಅಲ್ಲಾಭಕ್ಷಿ ಬಂಧಿತರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ರಾಹಿಲ್, ಕುರಂ, ತಾಸೀರ್, ಮಾಡ್ಲರ್ ಶಾರೂ ಎಸ್ಕೇಪ್ ಆಗಿದ್ದಾರೆ. ಇವರ ಪತ್ತೆಗೆ ಕಾರ್ಯಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಬಂಧಿತರಿಂದ ಪೊಲೀಸರು ಎರಡು ಕೆಜಿ 120 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ ಸುಮಾರು 80 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಘಟನೆಗೆ ಬಳಕೆ ಮಾಡಿಕೊಂಡಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ದೀಪಕ್, ಸಿಬ್ಬಂದಿಗಳಾದ ಅರುಣ್ ಕುಮಾರ್, ಸಂದೀಪ್, ಕಾಂತರಾಜು, ರಾಜೇಗೌಡ ಪಾಟೀಲ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
*ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..*
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್