Categories: Blog

ಶಿವಮೊಗ್ಗ : ನೌಕರಿ ಖಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ :

ಶಿವಮೊಗ್ಗ : ದೀರ್ಘಕಾಲದ  ಸೇವೆಯನ್ನು ಬಳಸಿಕೊಂಡ ಇಲಾಖೆಯು ಸೇವಾ ವಿಲೀನಗೊಳಿಸಿ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಲ್ಲೇಖ ಪತ್ರ 1ಮತ್ತು 2 ಅನುಸಾರ ದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆ ಮಾಡುವ ಬಗ್ಗೆ ಪರಿಶೀಲಿಸಿ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000ರಿಂದ 2021ರ ಅವಧಿಯ ವರೆಗೆ ನಿಯಮಾನುಸಾರವಾಗಿ ಆಯ್ಕೆಗೊಂಡ 14.564 ಅತಿಥಿ ಉಪನ್ಯಾಸಕರುಗಳು ಸೇವೆ ಸಲ್ಲಿಸುತ್ತಾ ಬಂದಿದ್ದೇವೆ.

 ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಗುಣಮಟ್ಟದ ಪಾಠ ಪ್ರವಚನ ಮಾಡುವ ದೃಷ್ಟಿಯಿಂದ ಸೇವಾ ಅನುಭವ ಹಾಗೂ ಭೋಜನ ಕೌಶಲ್ಯ ಹೊಂದಿರುವ ನಮ್ಮ ಗಳನ್ನು ಸೇವಾ ವಿಲೀನದ ವ್ಯಾಪ್ತಿಗೆ ತರಲು ಕೋರಿದೆ. ದೀರ್ಘಕಾಲದ ನಮ್ಮಗಳ ಸೇವೆಯನ್ನು ಬಳಸಿಕೊಂಡ ಇಲಾಖೆಯು ಸೇವಾ ವಿಲೀನಗೊಳಿಸಿ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಲ್ಲೇಖ ಪತ್ರ 1ಮತ್ತು 2 ಅನುಸಾರ ದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆ ಮಾಡುವ ಬಗ್ಗೆ ಪರಿಶೀಲಿಸಿ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬಹುದಾಗಿದೆ ಎಂಬ ಅಭಿಪ್ರಾಯವನ್ನು ಸರ್ಕಾರದ ಅವಗಾಹನೆಗೆ ಸಲ್ಲಿಸಿದ್ದಾರೆ ಆದ್ದರಿಂದ ತಾವು ಈ ಕೆಳಕಂಡ ನಿಯಮಗಳನ್ನು ಆಧರಿಸಿ ವೃಂದ ಮತ್ತು ನೇಮಕಾತಿ ನಿಯಮಗಳ ಖರೀದಿ ರಚಿಸಿ ಒಂದು ದಾರಿ ಮಾನವೀಯ ದೃಷ್ಟಿಯಿಂದ ಸೇವೆ ಕಾಯಂಗೊಳಿಸುವ ಕುರಿತು ಪ್ರಸ್ತಾಪನೆಯನ್ನು ಪ್ರಸ್ತುತ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಮಂಡಿಸಿ ಇತ್ಯರ್ಥಗೊಳಿಸಲು ಅಥವಾ ಸಚಿವ ಸಂಪುಟದ ಅನುಮತಿಗೆ ಸಲ್ಲಿಸಲು ಮಾನ್ಯ ಮುಖ್ಯಮಂತ್ರಿಗಳು ಮಧ್ಯೆ ಪ್ರವೇಶಿಸುವಂತೆ ಒತ್ತಾಯಿಸಿ ದಿನಾಂಕ 14/09/2021ರಿಂದ 18/09/2021ರವರೆಗೆ ರಾಜ್ಯಾದ್ಯಂತ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಧರಣಿ ನಡೆಸುವ ಮೂಲಕ ಆಗ್ರಹ ಪೂರ್ವಕವಾಗಿ ವಿನಂತಿಸುತ್ತೇವೆ. ದಿನಾಂಕ 13/09/2021ಚಂದು ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಧಾನಪರಿಷತ್ ಸದಸ್ಯರಿಗೆ ನೀಡಿರುವ ಲಿಖಿತ ಉತ್ತರವು ಸತ್ಯಕ್ಕೆ ಕಾರಣವಾಗಿದೆ.

 K.C.S.R( General Recruitment roles )1977ನಿಯಮ 1(3)(2)ಮತ್ತು 14ರ ಅಡಿ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮಾಡಿಕೊಂಡು ತಾತ್ಕಾಲಿಕ ನೌಕರರನ್ನು ಸೇವೆಯಲ್ಲಿ ವಿಲೀನಗೊಳಿಸಿ ಕಾಯಂ ಮಾಡಲು ಅವಕಾಶವನ್ನು ಹಾಗೂ ಸಂವಿಧಾನದ 309ನೇ ವಿಧಿ ಪ್ರಕಾರ ತಾತ್ಕಾಲಿಕ ನೌಕರರನ್ನು ಖಾಯಂ ಮಾಡಲು ಇಲಾಖೆಯ ಸಿ&ಆರ್ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಜತೆಗೆ ಈ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಕೊಳ್ಳುವ ಪರಮಾಧಿಕಾರವು ಶಾಸಕಾಂಗ ಮತ್ತು ಸಂಪುಟಕ್ಕೆ ಇರುತ್ತದೆ. ಆದ್ದರಿಂದ ಗೌರವಾನ್ವಿತ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಎಲ್ಲಾ ಗೌರವಾನ್ವಿತ ಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹಾಗೂ ಮಾನ್ಯ ವಿರೋಧ ಪಕ್ಷದ ನಾಯಕರು ಮಧ್ಯಪ್ರವೇಶಿಸಿ ಕಾನೂನಾತ್ಮಕವಾಗಿ ಇತ್ಯರ್ಥ ಗೊಳಿಸಬೇಕು ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

40 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago