Categories: Blog

ಶಿವಮೊಗ್ಗ : ಹುಣಸಗೋಡು ಸ್ಪೋಟ ಪ್ರಕರಣ ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ:


ಶಿವಮೊಗ್ಗ : ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.


ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ ಭೂಕಂಪದ ಅನುಭವವಾಗಿತ್ತು. ಘಟನೆ ನಡೆದ ಸ್ಥಳದ ಸುತ್ತ ಮುತ್ತಲಿನ ಗ್ರಾಮಗಳಾದ ಗೆಜ್ಜೆನಹಳ್ಳಿ ಹನುಮಂತನಗರ ಹುಣಸೋಡು ಅಬ್ಬಲಗೆರೆ ಮೋಜಪ ಹೊಸೂರು ಬಸವನಗಂಗುರು ಬೊಮ್ಮನಕಟ್ಟೆ ಕಲ್ಲು ಗಂಗೂರು ಸೇರಿದಂತೆ ಸುತ್ತಮುತ್ತಲ ಅನೇಕ ಗ್ರಾಮಗಳ ಮನೆಗಳು ಗೋಡೆಗಳು ಬಿರುಕು ಬಿಟ್ಟಿದ್ದು ಕೆಲ ಮನೆಗಳ ಮೇಲ್ಛಾವಣಿ ಮತ್ತೆ ಕೆಲವು ಮನೆಗಳ ಟಿವಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾನಿಗೊಳಗಾಗಿದ್ದು ಅನೇಕ ಗ್ರಾಮಸ್ಥರ ಕಿವಿ ತಮಟೆ ಗಳು ಹಾಳಾಗಿದೆ.


ಜಿಲ್ಲಾಡಳಿತ ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ಲಕ್ಷ್ಯದಿಂದ ತಮ್ಮದಲ್ಲದ ತಪ್ಪಿನಿಂದ ನೂರಾರು ಗ್ರಾಮಸ್ಥರು ಲಕ್ಷಾಂತರ ರೂಪಾಯಿಗಳ ನಷ್ಟ ಅನುಭವಿಸುವಂತಾಗಿದ್ದು ಹಾನಿಗೊಳಗಾದ ಮನೆಗಳು ಸುಮಾರು 850 ಸಂತ್ರಸ್ತರು ಪರಿಹಾರ ಕೋರಿ ಅರ್ಜಿ ಸಲ್ಲಿಸಿ 7-8 ತಿಂಗಳ ಕಳೆದರು ಇಲ್ಲಿಯವರೆಗೆ ಜಿಲ್ಲಾಡಳಿತ ಯಾವುದೇ ಪರಿಹಾರ ನೀಡಿರುವುದಿಲ್ಲ.

ಸಂತ್ರಸ್ತರು ವೇದಿಕೆಯ ಸಹಾಯದೊಂದಿಗೆ ನಡೆಸಿದ ನಿರಂತರ ಹೋರಾಟದಿಂದ ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸರಿಯಾಗಿ ಪರಿಶೀಲನೆ ನಡೆಸಿದೆ ಪ್ರತಿ ಮನೆಗಳು ಕೇವಲ ಶೇಕಡ 10 ರಷ್ಟು ಹಾನಿಯಾಗಿದೆ ಎಂದು ವರದಿ ನೀಡಿದ್ದು ವರದಿ ಪ್ರಕಾರ ಶೇಕಡ 10 ರಷ್ಟು ಪರಿಹಾರವನ್ನು ಜಿಲ್ಲಾಡಳಿತ ನೀಡಿರುವುದಿಲ್ಲ. ಸ್ಪೋಟದಿಂದ ಬಿರುಕುಬಿಟ್ಟ ಹಲವಾರು ಮರಗಳ ಮಳೆಯಿಂದಾಗಿ ಸಂಪೂರ್ಣ ನೆಲಸಮವಾಗಿದೆ. ನವ ಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ಸಂತ್ರಸ್ತರು ಆರೋಪಿಗಳ ಮೊಬೈಲ್ ಕರೆ ಆಧರಿಸಿ ತನಿಖೆ ನಡೆಸಲು ಜಿಲ್ಲಾ ರಕ್ಷಣಾಧಿಕಾರಿಗಳಿಗೂ ದೂರನ್ನು ಸಹ ನೀಡಿದ್ದೇವೆ.

ಆದ್ದರಿಂದ ತನಿಖೆಯನ್ನು ಸಿಬಿಐಗೆ ವಹಿಸಿ ಬದುಕಿರುವ ಮತ್ತು ಮೃತ ರಾಗಿರುವ ಆರೋಪಿಗಳಿಂದ ಮೊಬೈಲ್ ಕರೆ ಆಧಾರಿಸಿ ತನಿಖೆ ನಡೆಸಿದರೆ ದೊಡ್ಡ ಪ್ರಮಾಣದ ಸ್ಪೋಟಕ್ಕೆ ಕಾರಣವಾದ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಿ ಸಂತ್ರಸ್ತರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ.


ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

10 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

10 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

12 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

12 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

15 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

15 hours ago