Categories: Blog

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ


ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ ಜನ ನೀಡಿದ ಪ್ರೀತಿಯ ಗೌರವ ಸ್ವೀಕರಿಸಿದರು. ಇಲ್ಲಿನ ಹೆಣ್ಣನ್ನು ಮನೆದುಂಬಿಕೊಂಡು ಊರಿನ ಅಳಿಯಂದಿರಾಗಿದ್ದಕ್ಕೆ ಸಾಗರದ ಋಣ ತೀರಿಸುವ ಜವಾಬ್ದಾರಿಯೂ ಇದೆ ಎಂದು ಹೇಳಿದರು.

ರಾಜ್ಯ ಸರಕಾರದ ನೂತನ ಶಿಕ್ಷಣ ಸಚಿವರಾದ ನಾಗೇಶ್ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್ ಅವರನ್ನು ಭಾರತೀಯ ಜನತಾ ಪಕ್ಷದಿಂದ ಶನಿವಾರ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದ ರೂವಾರಿ ಶಾಸಕ ಹರತಾಳು ಹಾಲಪ್ಪ ಮಾತನಾಡಿ ನಮ್ಮೂರಿನ ಅಳಿಯಂದಿರು ಉನ್ನತ ಹುದ್ದೆಯಲ್ಲಿರುವಾಗ ಅವರನ್ನು ಸನ್ಮಾನಿಸುವುದು ನಮ್ಮ ಕರ್ತವ್ಯವಾಗಿದೆ. ಈ ಕಾರಣದಿಂದ ಅವರಿಗೆ ಗೌರವ ಸಮರ್ಪಣೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಚಿವರು ಸರಕಾರ ಮಟ್ಟದಲ್ಲಿ ಸಾಗರ ಕ್ಷೇತ್ರಕ್ಕೆ ಆಗಬೇಕಿರುವ ಕೆಲಸಗಳನ್ನು ಆದ್ಯತೆಯ ಮೇಲೆ ಮಾಡಿಕೊಡಬೇಕೆಂಬ ಮನವಿಯನ್ನೂ ಮಾಡಿದರು.
ಪತ್ನಿ ಪ್ರಿಯಾಂಕ ಸಮೇತರಾಗಿ ಸನ್ಮಾನ ಸ್ವೀಕರಿಸಿದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಮಾತನಾಡಿ ಇಲ್ಲಿಯ ನೆಲ ಸಂಸ್ಕಾರವನ್ನು ಕೊಟ್ಟಿದೆ ಜತೆಗೆ ಹೋರಾಟವನ್ನೂ ಕಲಿಸಿದೆ. ಸಾಗರದಲ್ಲಿ ಸೈಕಲ್ ತುಳಿದು ಓಡಾಟ ಮಾಡುತ್ತಿದ್ದ ನಾನು ಇಂದು ಸಚಿವನಾಗಿ ಇಲ್ಲಿಗೆ ಬಂದಿರುವುದರ ಹಿಂದೆ ಮಾರ್ಗದರ್ಶನ ನೀಡಿದ ಅನೇಕ ಹಿರಿಯರ ಪರಿಶ್ರಮವಿದೆ ಎಂದ ಅವರು ಜವಾಬ್ದಾರಿ ಹೊತ್ತು ಇಲ್ಲಿಗೆ ಬಂದಿದ್ದೇನೆ ಹಾಗಾಗಿ ಇಲ್ಲಿಯ ಸಮಸ್ಯೆಗಳ ಕುರಿತು ವಿಶೇಷ ಆದ್ಯತೆ ನೀಡುವುದು ಕೂಡ ನನ್ನ ಜವಾಬ್ದಾರಿ, ಸದಾ ಕಾರ್‍ಯಕರ್ತರ ಸಚಿವನಾಗಬೇಕು ಎನ್ನುವ ಬಯಕೆ ನನ್ನದಾಗಿದೆ ಇದರಿಂದಾಗಿ ಜನ ಸಾಮಾನ್ಯರ ಸಚಿವನಾಗಲು ಸಾಧ್ಯ ಎಂದರು.
ಪತ್ನಿ ವೀಣಾ ಅವರೊಂದಿಗೆ ಸನ್ಮಾನ ಸ್ವೀಕರಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ರಾಜಕೀಯ ಆಸಕ್ತಿ ಇಲ್ಲದಿದ್ದರೂ ಈಗ ರಾಜಕೀಯದಲ್ಲಿ ಬೆಳೆಯುವಂತೆ ಮಾಡಿರುವುದು ಬಿಜೆಪಿಯ ಸಂಘಟನೆಯ ಶಕ್ತಿ,ಇದೀಗ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬರುತ್ತಿರುವ ಹೊಸ್ತಿಲಿನಲ್ಲಿ ಶಿಕ್ಷಣ ಇಲಾಖೆಯಲ್ಲಿಯ ಕೆಲಸ ಸಂತಸ ತಂದಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಸಿದ್ಧಾಂತಕ್ಕಾಗಿ ಬದುಕಿದ ನಾವು ಹುದ್ದೆಗಾಗಿ ಆಸೆಪಟ್ಟವರಲ್ಲ, ಜತೆಗೆ ಅಂತಹ ಆಸೆ ಪಡುವ ಮೂಲಕ ಬೆಳೆಸಿದ ಪಕ್ಷಕ್ಕೆ ಗಾಯವನ್ನು ಎಂದೂ ಮಾಡಬಾರದು. ನಮಗಿಂತ ದೇಶ ದೊಡ್ಡದು, ಅದಕ್ಕೆ ಗೌರವ ನೀಡುವ ರೀತಿಯಲ್ಲಿ ನಮ್ಮ ನಡವಳಿಕೆ ಇರಬೇಕು ಮತ್ತು ಪಕ್ಷ ಕೊಟ್ಟ ಜವಾಬ್ದಾರಿ ಪ್ರಾಮಾಣಿಕವಾಗಿ ನಿರ್ವಹಿಸುವ ಒಳ್ಳೆಯತನ ರೂಢಿಸಿಕೊಂಡರೆ ಆಗ ಹುದ್ದೆ ಹುಡುಕಿ ಬರಲಿದೆ. ಹಿಂದೆ ತುರ್ತು ಪರಿಸ್ಥಿತಿ ಸಂಧರ್ಭದಲ್ಲಿ ಪೊಲೀಸರ ಕೈಯಲ್ಲಿ ಒದೆ ತಿಂದಿದ್ದೆ ಈಗ ಅದೇ ಕೈಯಲ್ಲಿ ಸೆಲ್ಯೂಟ್ ಹೊಡೆಸಿಕೊಳ್ಳುತ್ತಿರುವೆ ಇದು ಸಂಘದ ಹಾಗೂ ಬಿಜೆಪಿ ಪಕ್ಷದ ಶಕ್ತಿ  ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರತಾಳು ಹಾಲಪ್ಪ ವಹಿಸಿದ್ದರು. ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಶಾಸಕ ಬಿ.ಸ್ವಾಮಿರಾವ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ದತ್ತಾತ್ರೀ, ಆರ್‍ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್, ನಗರ ಸಭಾಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್, ಕೆ.ಆರ್. ಗಣೇಶ್ ಪ್ರಸಾದ್, ಲೋಕನಾಥ್ ಬಿಳಿಸಿರಿ, ಸಂತೋಷ್ ಶೇಟ್, ಪ್ರಿಯಾಂಕ್ ಸುನಿಲ್ ಕುಮಾರ್, ವೀಣಾ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

20 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

20 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

20 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago