Headlines

ಸಿದ್ದುಗೆ ಹುಚ್ಚು ಹಿಡಿದಿದೆ, ಅದು ಯಾವಾಗ ಬಿಡುತ್ತೋ ಗೊತ್ತಿಲ್ಲ: ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ನವರಿಗೆ ಹುಚ್ಚು ಹಿಡಿದಿದೆ. ಅದು ಯಾವಾಗ ಬಿಡುತ್ತದೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್​ಎಸ್​ಎಸ್​ ಟೀಕೆ ಮಾಡಿದರೆ, ಭಾರತೀಯ ಸಂಸ್ಕೃತಿಯನ್ನೆ ಟೀಕೆ ಮಾಡಿದಂತೆ. ನೆಹರು ಮತ್ತು ಗಾಂಧೀಜಿಯವರು ಆರ್​ಎಸ್ಎಸ್​ ಬಗ್ಗೆ ಪ್ರೀತಿ ಹೊಂದಿದ್ದರು. ಗಾಂಧೀಜಿ, ನೆಹರು ಮುಂದೆ ಸಿದ್ದು ಯಾವ ಲೆಕ್ಕ? ಸಿದ್ದರಾಮಯ್ಯ ಟೀಕೆ ಮಾಡುವ ಮೂಲಕ ಹೀರೋ ಆಗುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು.

ಉಪಚುನಾವಣೆ ಬಗ್ಗೆ ಮಾತನಾಡಿ, ಚುನಾವಣಾ ಆಯೋಗ ಎರಡು ಕ್ಷೇತ್ರಗಳ ಉಪಚುನಾವಣೆ ಘೋಷಣೆ ಮಾಡಿದೆ. ಎರಡೂ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಚುನಾವಣೆ ಮಾಡುತ್ತೇವೆ. ಬಿಜೆಪಿ ಎಲ್ಲಾ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು.

About The Author

Leave a Reply

Your email address will not be published. Required fields are marked *

Exit mobile version