ರಿಪ್ಪನ್ ಪೇಟೆ : ಅಕ್ರಮವಾಗಿ ಬೃಹದಾಕಾರದ ಸಾಗುವಾನಿ ಮರಗಳನ್ನು ಕಡಿದು ಕಳ್ಳತನ
ಮಾಡಿರುವ ಘಟನೆ ಸೂಡೂರು ಅರಣ್ಯ ಚೆಕ್ ಪೋಸ್ಟ್ ಬಳಿ ನಡೆದಿದೆ.
ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸೂಡೂರು ಮುಖ್ಯ
ರಸ್ತೆಯ ಬಳಿ ಹಾಗೂ ಸೂಡೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ನ ಕೂಗಳತೆಯ ದೂರದಲ್ಲಿ
ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಮರಗಳ್ಳರು ಅಕ್ರಮ ಪ್ರವೇಶ
ಮಾಡಿ ಲಕ್ಷಾಂತರ ರೂ ಬೆಲೆಬಾಳುವ ಸಾಗುವನಿ ಮರಗಳನ್ನು ಕಡಿದು ಮರದ ತುಂಡುಗಳನ್ನು ಅಕ್ರಮ
ಸಾಗಾಟ ಮಾಡಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ.
ರಸ್ತೆ ಬದಿಯಲ್ಲಿಯೇ ಈ ಕಳ್ಳತನ ನಡೆದಿದ್ದು, ಸುಮಾರು ಮೂರು ಬೃಹತ್ ಗಾತ್ರದ ಮರಗಳನ್ನು
ಕಡಿದು ಹಾಡಹಗಲೇ ಮರದ ತುಂಡುಗಳನ್ನು ಸಾಗಿಸಿರುವ ಘಟನೆ ನಡೆದಿದೆ.
ಇಂತಹ ಘಟನೆಗಳಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ನೇರ ಕಾರಣವೆಂದು ಸ್ಥಳೀಯ ಗ್ರಾಮಸ್ಥರು
ಆರೋಪಿಸಿದ್ದಾರೆ. ಹಳ್ಳಿಗಾಡು ಪ್ರದೇಶಗಳಲ್ಲಿ ವಾಸಿಸುವ ರೈತರು ಸೊಪ್ಪು, ದರಗಲು
ಎಲೆಗಳನ್ನು ತಂದು ಜಾನುವಾರುಗಳಿಗೆ,ಕೊಟ್ಟಿಗೆಗಳಿಗೆ ಹಾಕಿ ಗೊಬ್ಬರವನ್ನು
ತಯಾರಿಸುವುದು ರೂಡಿಯಾಗಿದ್ದು ಆದರೆ ಕ್ಷುಲ್ಲಕ ಕಾರಣಗಳನ್ನು ನೆಪವೊಡ್ಡಿ ರೈತರಿಗೆ ಅರಣ್ಯ
ಪ್ರವೇಶ ಮಾಡದಂತೆ ಹಾಗೂ ಸೊಪ್ಪುಗಳನ್ನು ತರದಂತೆ ತಾಕಿತು ಮಾಡುವ ಅರಣ್ಯ ಇಲಾಖೆಯ
ಅಧಿಕಾರಿಗಳು, ಅಕ್ರಮವಾಗಿ ಬೆಲೆಬಾಳುವ ಮರಗಳನ್ನು ಹಾಡಹಗಲೇ ರಾಜಾರೋಷವಾಗಿ ಕಳ್ಳತನ ಮಾಡಿದರೆ
ತುಟಿ ಪಿಟಿಕ್ ಎನ್ನದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಸಂಬಂಧ ಅರಣ್ಯ ಇಲಾಖೆಯು ಆಯನೂರಿನ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ
ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ಟಾರೆಯಾಗಿ ಹಳ್ಳಿಗಾಡಿನಲ್ಲಿ ರೈತಾಪಿ ಜನಗಳು ಕೃಷಿ ಉದ್ದೇಶಕ್ಕೆ ಸೊಪ್ಪು ಕಡಿದರೆ
ಅನಗತ್ಯ ದೂರುಗಳನ್ನು ದಾಖಲಿಸಿ ಕಿರುಕುಳ ಕೊಡುವ ಅರಣ್ಯ ಇಲಾಖೆಯ ಅಧಿಕಾರಿಗಳು ರಾಜಾರೋಷವಾಗಿ
ರಸ್ತೆ ಬದಿಯಲ್ಲಿಯೇ ಮರಗಳ್ಳರು ಲಕ್ಷಾಂತರ ಬೆಲೆಬಾಳುವ ಮರ ಕಡಿದಾಗ ಮೌನಕ್ಕೆ ಜಾರುವುದು
ಬೇಸರದ ಸಂಗತಿಯಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್