WhatsApp Channel Join Now
Telegram Channel Join Now
ಸೊರಬ : ಕೆರೆಗೆ ಈಜಲು ಹೋಗಿ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೊರಬ ತಾಲೂಕಿನಲ್ಲಿ ಬುಧವಾರ ಸಂಜೆ ಐದು ಗಂಟೆ ಸುಮಾರಿಗೆ ನಡೆದಿದೆ.

ತಾಲೂಕಿನ ಗೊಲ್ಲರಹಳ್ಳಿ ಕೆರೆಯಲ್ಲಿ ಈಜಲು ಹೋದ
ಎಣ್ಣೆಕೊಪ್ಪ ನಿವಾಸಿ ರವಿನಾಯ್ಕ (35) ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಘಟನೆಯ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸೊರಬ ಅಗ್ನಿಶಾಮಕ ದಳ ಸಿಬ್ಬಂದಿಗಳು ಸುಮಾರು ಎರಡು ತಾಸು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದರು.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಗಳಾದ ನಾಗರಾಜ್ ವಿ, ಮಹೇಶ್ ಮಡಿವಾಳ, ಪ್ರಶಾಂತ್ ಕೆಎನ್, ಪರಶುರಾಮಪ್ಪ ಎನ್, ಪ್ರಶಾಂತ್ ಕುಮಾರ್ ಹೆಚ್ ಎಂ, ಷಣ್ಮುಖ ಹಾಜರಿದ್ದರು.

ಸೊರಬ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ
ಘಟನೆವಾಗಿದ್ದು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Leave a Reply

Your email address will not be published. Required fields are marked *