Categories: Blog

ಸೊರಬ: ತೀ ನಾ ಶ್ರೀನಿವಾಸ್ ಹೇಳಿಕೆಗೆ ಬಿಜೆಪಿ ಖಂಡನೆ

ಸೊರಬ: ಕಾಂಗ್ರೆಸ್ ಮುಖಂಡ ತೀನಾ ಶ್ರೀನಿವಾಸ್ ರವರು ನೀಡಿರುವ ಸೊರಬದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಹೇಳಿಕೆಯನ್ನು ಖಂಡಿಸಿ ಸೊರಬ ಬಿಜೆಪಿ ಮುಖಂಡರು ಇಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಗರ್ ಹುಕುಂ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ ಚನ್ನಾಪುರ ಅವರು ಸಾಗರದ ಕಾಂಗ್ರೆಸ್ ಮುಖಂಡರಾದ ತೀ ನಾ ಶ್ರೀನಿವಾಸ್ ರವರು ಸೊರಬ ತಾಲ್ಲೂಕಿನ ಬಗರ್ ಹುಕುಂ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸಿ ಬಿಡುತ್ತೇನೆ ಎಂಬ ವಿಚಾರವಾಗಿ  ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗುಡ್ಡೇಕೊಪ್ಪ ಹಾಯಾ ಬೆಟ್ಟದಕೂರ್ಲಿ ಸಿದ್ದಿಹಳ್ಳಿ  ಮತ್ತು ತಾಳಗುಪ್ಪ ಭಾಗದ ರೈತರನ್ನು ಸೇರಿಸಿಕೊಂಡು ಬೊಗಳೆ ರಾಜಕಾರಣ ಮಾಡುತ್ತಾ ಮೊಸಳೆ ಕಣ್ಣೀರು ಸುರಿಸಿ ನಾಟಕದ ಮಾತುಗಳನ್ನು ಆಡುತ್ತಾ ಇರುವುದನ್ನು ಖಂಡಿಸುತ್ತೇವೆ ಎಂದರು.
 ಸೊರಬ ತಾಲ್ಲೂಕಿನಲ್ಲಿ ರೈತರಿಗೆ ಅನ್ಯಾಯವಾಗಿದೆ ಎಲ್ಲಾ ರೈತರನ್ನು ಒಕ್ಕಲೆಬ್ಬಿಸುವಂತೆ ಅರಣ್ಯ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ಮಾತನಾಡಿದ್ದಾರೆ ಯಾವುದೇ ಒಬ್ಬ ರೈತನನ್ನು  ಒಕ್ಕಲೆಬ್ಬಿಸುವ ಕೆಲಸ ಆಗಿಲ್ಲ ಎಲ್ಲ ರೈತರನ್ನ ನಾವು ಕಾಪಾಡುವಂತ ಕಾರ್ಯ ನಮ್ಮ ಬಗರ್ ಹುಕುಂ ಸಮಿತಿ ನಡೆಸುತ್ತಾ ಬಂದಿದೆ ಎಂದರು.

ಕುಮಾರ್ ಬಂಗಾರಪ್ಪನವರು ಮೂವತ್ತು ವರ್ಷದಿಂದ ರೈತರನ್ನು ರಕ್ಷಣೆ ಮಾಡುತ್ತಾ ಬಂದಿದ್ದಾರೆ ಮುಂದೆಯೂ ಮಾಡುತ್ತಾರೆ, ಅದನ್ನು ತೀ ನಾ ಶ್ರೀನಿವಾಸ್ ರವರ ಹತ್ತಿರ ಹೇಳಿಸಿಕೊಂಡು ಸೊರಬ ತಾಲ್ಲೂಕಿನ ರೈತರನ್ನು ರಕ್ಷಣೆ ಮಾಡುವಂತ ಅವಶ್ಯಕತೆ ನಮಗಿಲ್ಲ ಎಂದರು.
ಅವರು ಸಾಗರ ತಾಲ್ಲೂಕಿನಲ್ಲಿ ಹಿಂದೆ ಕಾಗೋಡು ತಿಮ್ಮಪ್ಪನವರು  ಕಂದಾಯ ಸಚಿವರಾದಂತ ಸಂದರ್ಭದಲ್ಲಿ ಈ ಹಿಂದೆ  ಕಾಂಗ್ರೆಸ್ ಮುಖಂಡರಾಗಿರುವವರು ಗಮನ ಹರಿಸದೆ ಹಾದಿಬೀದಿಯಲ್ಲಿ ಬಗರ್ ಹುಕುಂ ಹಕ್ಕುಪತ್ರವನ್ನು ಮಾರುವಂತಹ ಕೆಲಸವನ್ನು ಮಾಡಿದ್ದಾರೆ ಇದರ ಬಗ್ಗೆ ಅವರು ಗಮನ ಹರಿಸಲಿ ಎಂದರು.

ಈ ಸಂಧರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಂ ಡಿ ಉಮೇಶ್,ಆರಾಧನ ಸಮಿತಿಯ ಸದಸ್ಯ ಕೊಟ್ರೇಶ್ ಗೌಡ ಹಾಗೂ ಮಲ್ಲಿಕಾರ್ಜುನ ಕಡಸೂರು ಶಿವಕುಮಾರ್ ಭೋಗೆಶ್  ಬಿಜೆಪಿ ಮುಖಂಡರುಗಳಾದ ಸುರೇಶ್ ಉದ್ರಿ,ಕೃಷಮೂರ್ತಿ,ಮಲ್ಲೆಶಪ್ಪ,ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ::ವೆಂಕಟೇಶ್ ಚಂದ್ರಗುತ್ತಿ ಸೊರಬ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

4 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

10 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago