ಶಿವಮೊಗ್ಗ: ಸೊರಬ ಪುರಸಭೆ ಅಧ್ಯಕ್ಷ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ಲಭಿಸಿದೆ. ಪರಿಣಾಮ ಸೊರಬ ಪುರಸಭೆ ಅಧ್ಯಕ್ಷ ಸ್ಥಾನ ಬಿಜೆಪಿ ಕೈ ತಪ್ಪಿದೆ.
ಇಂದು ಸೊರಬ ಪುರಸಭೆ ಉಪಾಧ್ಯಕ್ಷೆ ಮಧುರಾ ಜಿ.ಶೇಟ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ನಡೆದ ಅವಿಶ್ವಾಸ ನಿರ್ಣಯದ ಪರ 11 ಮತಗಳು ಲಭ್ಯವಾಗಿದೆ. 12 ಜನ ಸದಸ್ಯರಿರುವ ಪುರಸಭೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 4, ಜೆಡಿಎಸ್ ಹಾಗೂ ಪಕ್ಷೇತರ ಸದಸ್ಯರು ತಲಾ 1 ಸ್ಥಾನ ಲಭಿಸಿದ್ದು, 12 ಜನ ಸದ್ಯರಲ್ಲಿ ಅವಿಶ್ವಾಸ ನಿರ್ಣಯದ ಪರ 11 ಮತ ಬಂದಿದೆ. ಇದರೊಂದಿಗೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಅವರಿಗೆ ತೀವ್ರ ಮುಖಭಂಗ ಎದುರಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಸಭೆ ನಡೆಸಿದ ಚರ್ಚೆ ನಡೆಸಿದ್ದರು. ಈ ವೇಳೆ ಅಧ್ಯಕ್ಷರ ವರ್ತನೆ ವಿರುದ್ಧ ಸದಸ್ಯರು ಆಕ್ರೋಶ ಹೊರ ಹಾಕಿದ್ದರು. ಸಭೆಯ ಬಳಿಕವೂ ಅವಿಶ್ವಾಸ ನಿರ್ಣಯ ಮಂಡಿಸಿ ಗೆಲುವು ಪಡೆಯುವಲ್ಲಿ ಸದಸ್ಯರು ಯಶಸ್ವಿಯಾಗಿದ್ದಾರೆ. ಅವಿಶ್ವಾಸ ನಿರ್ಣಯ ಸಂದರ್ಭದ ಸಭೆಗೆ ಗೈರಾದ ಬಿಜೆಪಿಯ ಎಂಎಲ್ಎ, ಎಂಎಲ್ಸಿ ಹಾಗೂ ಎಂಪಿ ಮೂವರು ಗೈರು ಹಾಜರಾಗಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್