Categories: Blog

ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ

ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ.


ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ ಕೋಳಿ, ಕುರಿ, ಅಡುಗೆ ವಸ್ತುಗಳನ್ನು ಕೊಟ್ಟು ಕಳುಹಿಸುತ್ತಿದ್ದಾರೆ. ಅರಣ್ಯ ವ್ಯಾಪ್ತಿಯಲ್ಲಿ ಅಡುಗೆ ಮಾಡುವುದಕ್ಕೂ ಬಿಡದೆ ಹಿಂದಕ್ಕೆ ಕಳುಹಿಸಲಾಗುತ್ತಿದೆ.
ಗ್ರಾಮಸ್ಥರ ತಪಾಸಣೆ ವೇಳೆ ಕೆಲವರು ಸ್ಥಳೀಯರೊಂದಿಗೆ ಮಾತಿನ ಚಕಮಕಿ ನಡೆಸಿದರು. ಆದರೆ ಇದ್ಯಾವುದಕ್ಕೂ ಬಗ್ಗದ ಸ್ಥಳೀಯರು ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ಮಾತ್ರ ಅವಕಾಶ ನೀಡಿದರು. ಗ್ರಾಮಸ್ಥರು ತಪಾಸಣೆ ಆರಂಭಿಸುತ್ತಿದ್ದಂತೆ ಮಾಳೂರು ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ನೀಡಿ ಪರಿಶೀಲಿಸಿದರು. ಜಗಳಕ್ಕಿಳಿಯುತ್ತಿದ್ದ ಪ್ರವಾಸಿಗರು, ಭಕ್ತರಿಗೆ ಎಚ್ಚರಿಕೆ ಕೊಟ್ಟು ಕಳುಹಿಸಿದರು.

ಹಣಗೆರೆಕಟ್ಟೆಯಲ್ಲಿರುವ ಶ್ರೀ ಚೌಡೇಶ್ವರಿ ಭೂತರಾಯ ಹಾಗೂ ಸೈಯದ್ ಸಾದತ್ ದರ್ಗಾ ಇರುವ ಧಾರ್ಮಿಕ ಕ್ಷೇತ್ರದಲ್ಲಿ ಆದೇಶ ಉಲ್ಲಂಘನೆಯಾಗಿದ್ದು ಈ ಹಿಂದೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರದಲ್ಲಿ ಕುರಿ – ಕೋಳಿ ಬಲಿ ಕೊಡುವುದನ್ನು ತಹಶೀಲ್ದಾರ್ ನಿಷೇಧ ಮಾಡಿದ್ದರು.

ಇದೀಗ ತಹಶೀಲ್ದಾರ್ ಆದೇಶ ಉಲ್ಲಂಘನೆ ಮಾಡಿ ಭಕ್ತರು ಪ್ರಾಣಿ ಬಲಿ ನೀಡುತ್ತಿದ್ದಾರೆ ಇದರಿಂದ ಇಲ್ಲಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು ಅಲ್ಲದೆ ಪ್ರಾಣಿ ಬಲಿ ಕೊಡಲು ಬರುತ್ತಿರುವ ಭಕ್ತರ ವಾಹನಗಳನ್ನು ತಡೆದು ವಾಪಸು ಕಳುಹಿಸಿದ್ದಾರೆ.

ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಹಣಗೆರೆಕಟ್ಟೆ ಕ್ಷೇತ್ರದ 2 ಕಿ.ಮೀ ವ್ಯಾಪ್ತಿಯ ಅರಣ್ಯದಲ್ಲಿ ಈ ರೀತಿಯ ಕೆಲಸ ಮಾಡಲಾಗುತ್ತಿದೆ, ಪ್ರಾಣಿ ಬಲಿ ನೀಡುವವರು ಹಣೆಗೆರೆಕಟ್ಟೆ, ಕೆರೆಹಳ್ಳಿಯ ಅರಣ್ಯ ದೊಳಗೆ ಅಡುಗೆ ಮಾಡುತ್ತಿದ್ದಾರೆ ಇದರಿಂದ ಸ್ಥಳೀಯ ಪರಿಸರ ಹಾಳಾಗುತ್ತಿದೆ ಹಾಗಾಗಿ ಹರಕೆ ತೀರಿಸಿ, ಅರಣ್ಯದೊಳಗೆ ಅಡುಗೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago