ಭದ್ರಾವತಿ ನಗರಸಭೆ: ಜೆಡಿಎಸ್​​ ಅಭ್ಯರ್ಥಿಗೆ ಭರ್ಜರಿ ಗೆಲುವು, ಠೇವಣಿ ಕಳೆದುಕೊಂಡ ಬಿಜೆಪಿ

ಭದ್ರಾವತಿ : ಇಲ್ಲಿನ ನಗರಸಭೆ 29ನೇ ವಾರ್ಡ್‌ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್ ಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಗೆಲುವಿನಿಂದ ಭದ್ರಾವತಿ ನಗರಸಭೆ ಯಲ್ಲಿ ಜೆಡಿಎಸ್ ಸ್ಥಾನ 12ಕ್ಕೆ ಏರಿಕೆಯಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್​ನ ನಾಗರತ್ನ ಅನಿಲ್‌ ಕುಮಾರ್ 1,282 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಲೋಹಿತಾ ನಂಜಪ್ಪ 832 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ…

Read More

ನಿಗದಿತ ಅವಧಿಯ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಚಿವ ಸಿ.ಸಿ.ಪಾಟೀಲ್

ಶಿವಮೊಗ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ…

Read More

ಜಾನಪದ ಸಮೂಹ ಗಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ :

ಹೊಸನಗರ : ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕ್ರತಿಕ ಮೇಳದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಕರ ಸಮೂಹವು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಇದೇ ತಿಂಗಳು 15,16,17 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 75ನೇ ಆಜಾದ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಸಾಧನೆಗೈದ ತಾಲೂಕಿನ ಪ್ರತಿಭಾವಂತ ಶಿಕ್ಷಕರುಗಳಾದ ತೀರ್ಥಕುಮಾರ್ ,ದುಗ್ಗಪ್ಪ,ಮೋಹನ್ ಕುಮಾರ್ ಸಿ,ಪ್ರಕಾಶ್,ಮೋಹನ್ ಹೆಚ್ ಆರ್ ,ತಿಮ್ಮಪ್ಪ ಕಣಬಂದೂರು ,ದೊಡ್ಡಪ್ಪ,ಸೈಯದ್ ಇರ್ಫ಼ಾನ್ ,ಮನೋಹರ…

Read More

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read More

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ :

ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ, ಸರಳ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮನೋರಂಜನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಮನೆ, ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಗಲ್ಲಿಗೊಂದರಂತೆ ಗಣೇಶ ಕೂರಿಸುವುದಕ್ಕೆ ಅನುಮತಿ ನೀಡಿಲ್ಲ. ಕೊರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುವ ಸಾಧ್ಯತೆಯಿದೆ. ಗಣೇಶೋತ್ಸವಕ್ಕೆ ಸರ್ಕಾರದ ಷರತ್ತುಗಳೇನು..? -ಮೆರವಣಿಗೆ ಮಾಡುವುದಕ್ಕೆ…

Read More

ಆಹ್ವಾನ ಸಿಗದಿದ್ದಕ್ಕೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್​ MLC ಪ್ರತಿಭಟನೆ : ಕೈ ಮುಗಿದು ವೇದಿಕೆಗೆ ಕರೆದ ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್​ಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮೇಲ್ದರ್ಜೆಗೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ತುಂಗಾ ನದಿಗೆ ನೂತನ ಸೇತುವೆ ಕಾಮಗಾರಿ ಸೇರಿ ಒಟ್ಟು 580.98 ಕೋಟಿ ರೂ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಚಾಲನೆ ನೀಡಲು ಆಗಮಿಸಿದ್ದರು. ಈ ವೇಳೆ ಹೊಳೆಹೊನ್ನೂರು ರಸ್ತೆಯಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದ…

Read More

ಮಾಜಿ ಸಿಎಂ ಬಿಎಸ್​ವೈ ಒಡೆತನದ ಕಾಲೇಜು ಬಸ್​ಗಳಲ್ಲಿ ಡೀಸೆಲ್​ ಕದ್ದಿದ್ದ ಕಳ್ಳರ ಬಂಧನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಒಡೆತನದ ಖಾಸಗಿ ಕಾಲೇಜಿನ ನಾಲ್ಕು ಬಸ್ಸುಗಳಲ್ಲಿ 580 ಲೀಟರ್ ಡೀಸೆಲ್​ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಪ್ರಕರಣ ಬೆನ್ನತ್ತಿದ್ದ ವಿನೋಬಾನಗರ ಪೊಲೀಸರು ಟಿಪ್ಪುನಗರದ ಸೈಯದ್ ತಬರೇಕ್ (24)ಹಾಗೂ ಸೈಯದ್ ಜಾಫರ್ (24) ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 90 ಲೀಟರ್ ಡೀಸೆಲ್​ ಹಾಗೂ ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. *ಘಟನೆ ವಿವರ :* ಶಿವಮೊಗ್ಗದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್​ಮೆಂಟ್ ಬಳಿ…

Read More

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ…

Read More

ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read More

ರಿಪ್ಪನ್ ಪೇಟೆ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಸುಗೂಸು : ಸಹಾಯಕ್ಕಾಗಿ ಯಾಚನೆ

ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದೆ. ಸದ್ಯ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ಷಾಂತರ ರೂ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದೆ. ಈ ಕುಟುಂಬದಲ್ಲಿ  ಲಕ್ಷಾಂತರ ವೆಚ್ಚ ಪಾವತಿಸಲು…

Read More