ಅರ್ಧ ಲಕ್ಷ ರೂ. ದಾಟಿದ ಕೆಂಪಡಕೆ ದರ, ಹಬ್ಬಕ್ಕೂ ಮುನ್ನ ಅಡಕೆ ಬೆಳೆಗಾರರಿಗೆ ಭರ್ಜರಿ ಗಿಫ್ಟ್‌!

ಶಿವಮೊಗ್ಗ : ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹೆಚ್ಚಿದ ದರದಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಅತೀ ಹೆಚ್ಚು ಅಡಿಕೆ ಬೆಳೆಯುವ ಹೊಸನಗರ,ತೀರ್ಥಹಳ್ಳಿ, ಸಾಗರ ಬಾಗದ ರೈತರ ಮನೆಯಲ್ಲಿ ಹಬ್ಬದ ವಾತಾವರಣವಾಗಿದೆ. ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ…

Read More

ಸೊರಬ: ಚಲಿಸುತ್ತಿದ್ದಾಗ ಧಗ ಧಗನೇ ಹೊತ್ತಿ ಉರಿದ ಕಾರು

ಸೊರಬ :  ತಾಲೂಕಿನ ಚಿಕ್ಕಚೌಟಿಯಿಂದ ಆನವಟ್ಟಿಗೆ ಹೊರಟಿದ್ದ ಮಾರುತಿ ಸ್ವಿಫ್ಟ್ ಡಿಸೈರ್  ಕಾರಿನಲ್ಲಿ ದಟ್ಟನೆ ಹೊಗೆ ಕಾಣಿಸಿಕೊಂಡಿದೆ. ರಾಜು ಎಂಬುವರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದು ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ್ದಾರೆ. ನಿಲ್ಲಿಸಿದ ಕ್ಷಣ ಮಾತ್ರದಲ್ಲಿ ಇಡೀ ವಾಹನಕ್ಕೆ ಧಗ್ಗನೇ ಬೆಂಕಿ ಹೊತ್ತಿಕೊಂಡಿದೆ. ಧಗ ಧಗನೇ ಬೆಂಕಿಗೆ ವಾಹನ ಸಂಪೂರ್ಣ ಹೊತ್ತಿ ಉರಿದಿದೆ. ಅಕ್ಕ ಪಕ್ಕದ ತೋಟದ ಮನೆಯವರು ಬಂದು ಬೆಂಕಿ ಆರಿಸಲು ಯತ್ನಿಸಿದ್ದಾರೆ. ಚಲಿಸುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್‌ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಮೊದಲಿಗೆ ಬ್ಯಾನೆಟ್ ನಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read More

ಶಿಕಾರಿಪುರದ ತಾಲೂಕ್ ಕ್ರೀಡಾಂಗಣದ ನೂತನ ಜಿಮ್ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ.

ಶಿಕಾರಿಪುರದ ವಿವಿಧ ಸಮಾರಂಭದಲ್ಲಿ ಭಾಗವಹಿಸಿದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ,ಇಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಮಲ್ಟಿ ಜಿಮ್ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಬಿ ವೈ ರಾಘವೇಂದ್ರ ಈ ಸುಸಜ್ಜಿತ ವ್ಯಾಯಾಮ ಶಾಲೆಯ ಉಪಯೋಗವನ್ನು ನಗರದ ಯುವಕರು ಪಡೆದುಕೊಳ್ಳಬೇಕು. ಯುವ ಶಕ್ತಿಯೇ ರಾಷ್ಟ್ರದ ಶಕ್ತಿ, ಯುವಜನತೆ ಸದೃಢರಾದರೆ ದೇಶವು ಎಂದಿಗೂ ಸದೃಢ.ದೇಶದ ಜನ ದೇಹವನ್ನು ಬಲಿಷ್ಠವಾಗಿ ಹಾಗು ಆರೋಗ್ಯಕರವಾಗಿ ಇದ್ದರೆ ಯಾವ ಅರೋಗ್ಯದ ಸಮಸ್ಯೆ ಇಲ್ಲದೆ ಬದುಕಬಹುದು ಎಂದು ಹೇಳಿದರು. ಶಿವಮೊಗ್ಗ…

Read More

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ…

Read More

ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗ:  ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.  ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು. ರಸ್ತೆಯ ಒಂದು ಕಿ.ಮೀ…

Read More

ತೀರ್ಥಹಳ್ಳಿ : ಬರಹಗಾರ್ತಿ ಪದ್ಮಜಾ ಜೋಯ್ಸ್ ರವರ “ಕೃಷ್ಣತರಂಗಿಣಿ” ಕೃತಿ ಲೋಕಾರ್ಪಣೆ :

ತೀರ್ಥಹಳ್ಳಿ: ಲೇಖಕ ವಿಷಯವನ್ನು ಗ್ರಹಿಸಿ ತಪಸ್ಸಿನಂತೆ ಬರವಣಿಗೆ ಮಾಡಿದಾಗ ಮಾತ್ರ ಯಶಸ್ವಿಯಾಗುತ್ತಾನೆ. ಸತ್ವಯುತ, ಶಕ್ತಿಯುತವಾದ ಕೃಷ್ಣ ತರಂಗಿಣಿ ಕೃತಿಯಿಂದ ಸಮಾಜ ಸದೃಢವಾಗಲಿ ಎಂದು ಅಖಿಲ ಭಾರತ ಸಾಹಿತ್ಯ ಪರಿಷತ್‌ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಅರೂರು ಅಭಿಪ್ರಾಯಪಟ್ಟರು. ತೀರ್ಥಹಳ್ಳಿ ಪಟ್ಟಣದ ಲಯನ್ಸ್ ಭವನದಲ್ಲಿ ಬೆಂಗಳೂರಿನ ಸ್ನೇಹ ಬುಕ್ ಹೌಸ್ ಪ್ರಸ್ತುತಪಡಿಸಿ ತೀರ್ಥಹಳ್ಳಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಬರಹಗಾರ್ತಿ ದರಲಗೋಡು ಪದ್ಮಜಾ ಜೋಯ್ಸ್ ರವರ ‘ಕೃಷ್ಣ ತರಂಗಿಣಿ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಶ್ರೇಷ್ಠ ಪರಂಪರೆ ನೀಡಿದ ದೇಶ ನಮ್ಮದು,ಸಾಹಿತಿಗಳು ದೇಶವನ್ನು…

Read More

ಭದ್ರಾವತಿ : KSRTC ಬಸ್ ನಿಲ್ದಾಣಕ್ಕೆ ಎಂ ಜೆ ಅಪ್ಪಾಜಿ ಹೆಸರಿಡಲು ಆಗ್ರಹ

ಭದ್ರಾವತಿ: ನಗರದ ಕೆಎಸ್‌ಆರ್‌ ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿ: ಎಂ.ಜೆ ಅಪ್ಪಾಜಿಯವರ ಹೆಸರನ್ನು ನಾಮಕರಣ ಗೊಳಿಸುವಂತೆ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾ ಣಕ್ಕೆ ಅಗತ್ಯವಿರುವ  ಅನುದಾನ ಶೀಘ್ರ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಸಚಿವ ಕೆ.ಎಸ್ ಈಶ್ವರಪ್ಪ ರವರಿಗೆ ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮೂರು ಬಾರಿ ಶಾಸಕರಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ, ಎಲ್ಲಾ ವರ್ಗದ ಜನರ ಏಳಿಗೆಗಾಗಿ ಹಗಲಿರುಳು ಶ್ರಮಿಸಿರುವ ದಿ: ಎಂ.ಜೆ…

Read More

ಹಾರನಹಳ್ಳಿ : ನೇಣು ಬಿಗಿದುಕೊಂಡು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ :

ಹಾರನಹಳ್ಳಿ : ಪಟ್ಟಣದ ವ್ಯಾಪ್ತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಏಳನೇ ತರಗತಿಯ ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.  ಹದಿಹರೆಯದ ಬಾಲಕ, ಬಾಲಕಿಯರಲ್ಲಿ ಇತ್ತೀಚಿನ ದಿನಗಳಲ್ಲಿ…

Read More

ಅವ್ಯವಸ್ಥೆಯ ಆಗರ ರಿಪ್ಪನ್ ಪೇಟೆಯ ನಾಡಕಚೇರಿ : ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರ ಹರಸಾಹಸ

ರಿಪ್ಪನ್ ಪೇಟೆ:  ತಾಲ್ಲೂಕಿನಲ್ಲಿಯೇ ಅತೀ ದೊಡ್ಡ ಹೋಬಳಿ ರಿಪ್ಪನ್ ಪೇಟೆ ವ್ಯಾಪ್ತಿಯ ನಾಡಕಛೇರಿಯಲ್ಲಿನ ಅವ್ಯವಸ್ಥೆಯಿಂದ ಜನಸಾಮಾನ್ಯರು ಪ್ರತಿದಿನ ಪರದಾಡುವಂತಾಗಿದೆ. ರಿಪ್ಪನ್ ಪೇಟೆ ಹೋಬಳಿ ವ್ಯಾಪ್ತಿಯು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯ ವಿಧವಾ ವೇತನ, ವೃದ್ಯಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬೆಳೆ ದೃಡೀಕರಣ ಪತ್ರ, ಜಮೀನು ಸರ್ವೇಗಾಗಿ ಭೂ ಮಾಪನಾ ಅರ್ಜಿ ಸಲ್ಲಿಕೆ, ವಾಸಸ್ಥಳ, ವಂಶವೃಕ್ಷ, ಅತ್ಯವಶ್ಯಕ ದೃಡೀಕರಣ ಪತ್ರಗಳು ಸೇರಿ ವಿವಿಧ ಯೋಜನೆಗಳ ಸೌಲಭ್ಯಗಳಿಗಾಗಿ…

Read More